ಬೆಂಗಳೂರು: ನಗರದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮತ್ತೆ ಆತಂಕ ಜನರಲ್ಲಿ ಮನೆ ಮಾಡಿದೆ.
ನಗರದ ಹೊಸೂರು ರಸ್ತೆಯ ಕೂಡ್ಲು ಗೇಟ್ ಹತ್ತಿರ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ದಾಮೊದರ್ ರೆಡ್ಡಿ ಎಂಬುವವರ ಮನೆಯ ಹತ್ತಿರ ಈ ಚಿರತೆ ಕಾಣಿಸಿಕೊಂಡಿದೆ.
ಚಿರತೆ ಕಾಣಿಸಿಕೊಳ್ಳುತ್ತಿದ್ದಂತೆ ಬೀದಿ ನಾಯಿಗಳು ಚಿರತೆಯನ್ನು ಓಡಿಸಿಕೊಂಡು ಹೋಗಿವೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಿವಾಸಿಗಳನ್ನು ವಿಡಿಯೋ ಕಂಡು ಬೆಚ್ಚಿ ಬಿದ್ದಿದ್ದಾರೆ. ಆತಂಕ ಸೃಷ್ಟಿಸಿರುವ ಚಿರತೆಯನ್ನು ಕೂಡಲೇ ಸೆರೆ ಹಿಡಿಯಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.