ಅಪ್ಪು ಪುಣ್ಯಸ್ಮರಣೆ | ರಕ್ತದಾನ ಮಾಡಿದ ಶಿವಣ್ಣ
ಬೆಂಗಳೂರು: ಕನ್ನಡದ ರಾಜರತ್ನ, ಕರುನಾಡ ನಟಸಾರ್ವಭೌಮ ನಟ ಪುನೀತ್ ರಾಜಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ 12 ದಿನ.
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಅಪ್ಪು ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
ಈ ಮಧ್ಯೆ ನಟ ಶಿವರಾಜ್ ಕುಮಾರ್ ಅವರು ರಕ್ತದಾನ ಮಾಡಿ ಮಾದರಿಯಾಗಿದ್ದಾರೆ.
ಹೌದು..! ನಗರದ ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಊಟ ಬಡಿಸಿದ ಬಳಿಕ ಶಿವಣ್ಣ, ರಕ್ತದಾನ ಮಾಡಿದ್ದಾರೆ.
ಇಂದು ಅಪ್ಪು ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರ ಹಾಕಲಾಗಿದೆ.
ಬೆಳಗ್ಗಿಂದ ಇದುವರೆಗೆ ಒಟ್ಟು 15 ಜನರಿಂದ ರಕ್ತದಾನ ಮಾಡಿದ್ದು, 16 ಮಂದಿ ನೇತ್ರದಾನಕ್ಕೆ ಸಹಿ ಮಾಡಿದ್ದಾರೆ. ರಕ್ತದಾನದ ವೀಕ್ಷಣೆ ಮಾಡುತ್ತಿದ್ದ ಶಿವಣ್ಣ ನಂತರ ತಾವೂ ರಕ್ತ ನೀಡಿದ್ದಾರೆ.
ಇತ್ತ ಪುನೀತ್ ರಾಜಕುಮಾರ್ ಅಗಲಿಕೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅನ್ನಸಂತರ್ಪಣೆ ಕಾರ್ಯ ನಡೆಯುತ್ತಿದೆ.
ಈ ಕಾರ್ಯಕ್ರಮಕ್ಕೆ 25 ಸಾವಿರಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆ ಇದೆ.
ಈ ಹಿನ್ನೆಲೆಯಲ್ಲಿ ಅರಮನೆ ಮೈದಾನದ ಸುತ್ತ ಮುತ್ತ 1 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಜೊತೆಗೆ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಗೇಟ್ ನಂ.1 ಕೃಷ್ಣ ವಿಹಾರದಲ್ಲಿ ಸಾರ್ವಜನಿಕರಿಗೆ ವಾಹನ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಗೇಟ್ ನಂ.4 ಗಾಯತ್ರಿ ವಿಹಾರದಲ್ಲಿ ವಿಐಪಿ ವಾಹನಗಳ ಪಾರ್ಕಿಂಗ್ ಗೆ ಅವಕಾಶ ಕಲ್ಪಿಸಲಾಗಿದೆ.