ಉಡುಪಿ, ದ.ಕ ಜಿಲ್ಲೆಯಲ್ಲಿ ಏಪ್ರಿಲ್ 14 -15ರಂದು ಗುಡುಗು ಮಿಂಚು ಸಹಿತ ಭಾರಿ ಮಳೆ ಸಾಧ್ಯತೆ
ಬಿಸಿಲ ಬೇಗೆಯಿಂದ ತತ್ತರಿಸಿರುವ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಏಪ್ರಿಲ್ 14, 15ರಂದು ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ರಾಜ್ಯದಲ್ಲಿ ಎಪ್ರಿಲ್ 12 ರ ಬಳಿಕ ಮಳೆ ಬಿರುಸುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಪ್ರಿಲ್ 12 ರಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಜಿಲ್ಲೆಗಳಲ್ಲಿ ಏಪ್ರಿಲ್ 14, 15 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಏಪ್ರಿಲ್ 13 ರಿಂದ 15 ರವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಕೋಲಾರ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಳಗಾವಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಿಡ್ನಿ ಸ್ಟೋನ್ ಸಮಸ್ಯೆಗೆ ಬೀಟ್ರೂಟ್ ನ ಮನೆಮದ್ದುhttps://t.co/eee6aOjFG0
— Saaksha TV (@SaakshaTv) April 8, 2021
ಉರಿಬಿಸಿಲಿಗೆ ತಂಪಾದ ಬೂದು ಕುಂಬಳಕಾಯಿ ಜ್ಯೂಸ್https://t.co/trQ50Lcaki
— Saaksha TV (@SaakshaTv) April 8, 2021
ಸ್ಮಾರ್ಟ್ಫೋನ್ ಬಳಸುವವರು ವಹಿಸಬೇಕಾದ ಮುನ್ನೆಚ್ಚರಿಕೆಗಳುhttps://t.co/GlDX34UUhx
— Saaksha TV (@SaakshaTv) April 9, 2021
ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನದ ಜೊತೆಗೆ ಶಿಕ್ಷಕಿಯ ಸ್ವಂತ ದುಡಿಮೆಯ ಹಣದಿಂದ ಠೇವಣಿ ಯೋಜನೆhttps://t.co/tGfDRpL0ly
— Saaksha TV (@SaakshaTv) April 9, 2021
#Heavyrains #thunderstorms #Mangalore #udupi