ADVERTISEMENT
Wednesday, December 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಐಪಿಎಲ್ ಗೆ ಅರ್ಜುನ್ ತೆಂಡುಲ್ಕರ್ ಅರ್ಹತೆ… ಸಾಮಾಜಿಕ ಜಾಲ ತಾಣದಲ್ಲಿ ಸಚಿನ್ ಗೆ ಬೌನ್ಸರ್ ಪ್ರಶ್ನೆಗಳು ಪಕ್ಕಾ..!

admin by admin
February 6, 2021
in Newsbeat, Sports, ಕ್ರೀಡೆ
arjun tendulkar sachin tendulkar ipl 2021 saakshatv
Share on FacebookShare on TwitterShare on WhatsappShare on Telegram

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

ಐಪಿಎಲ್ ಗೆ ಅರ್ಜುನ್ ತೆಂಡುಲ್ಕರ್ ಅರ್ಹತೆ… ಸಾಮಾಜಿಕ ಜಾಲ ತಾಣದಲ್ಲಿ ಸಚಿನ್ ಗೆ ಬೌನ್ಸರ್ ಪ್ರಶ್ನೆಗಳು ಪಕ್ಕಾ..!

arjun tendulkar sachin tendulkar ipl 2021 saakshatvಮತ್ತೊಮ್ಮೆ ಸಚಿನ್ ತೆಂಡುಲ್ಕರ್ ವಿರುದ್ಧ ಮತ್ತೆ ಸಾಮಾಜಿಕ ಜಾಲ ತಾಣದಲ್ಲಿ ಟೀಕೆಗಳು, ಆರೋಪಗಳು ಬರುವುದು ಖಂಡಿತ. ಇದರಲ್ಲಿ ಸಂಶಯವೇ ಇಲ್ಲ. ಯಾಕಂದ್ರೆ ಈ ಒಂದು ವಿಚಾರಕ್ಕೆ…!

ರೈತರ ಹೋರಾಟದ ಬಗ್ಗೆ ಸಚಿನ್ ತೆಂಡುಲ್ಕರ್ ಮಾತನಾಡಿಲ್ಲ. ಆದ್ರೆ ರಿಹಾನಾ ಟ್ವಿಟ್ ಬಗ್ಗೆ ಮಾತನಾಡಿ ಸಾಮಾಜಿಕ ಜಾಲ ತಾಣದಲ್ಲಿ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯ್ತು. ಅಷ್ಟೇ ಅಲ್ಲ, ಸಚಿನ್ ವ್ಯಕ್ತಿತ್ವ, ಸಾಧನೆಯನ್ನು ಕೂಡ ಪ್ರಶ್ನೆ ಮಾಡಿದ್ದರು.

ಇದೀಗ ಸಚಿನ್ ಮಗ ಅರ್ಜುನ್ ತೆಂಡುಲ್ಕರ್ ಐಪಿಎಲ್ ಹರಾಜಿನ ಪಟ್ಟಿಯಲ್ಲಿ ಸೇರಿಸಿಕೊಂಡಿದ್ದಾರೆ. ಹೀಗಾಗಿ ಸಚಿನ್ ತೆಂಡುಲ್ಕರ್ ವಿರುದ್ಧ ಪ್ರಹಾರಗಳು ಬರೋದು ಪಕ್ಕಾ.
ಸಚಿನ್ ತೆಂಡುಲ್ಕರ್ ಮಗನ ಆಯ್ಕೆಗೆ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಂಬಾನಿ ಪ್ರಭಾವ ಬೀರುತ್ತಿದ್ದಾರೆ ಅನ್ನೋದು ಕೇವಲ ಭ್ರಮೆಯಷ್ಟೇ..
ಅಷ್ಟಕ್ಕೂ ಸಚಿನ್ ತೆಂಡುಲ್ಕರ್ ಮಗನ ಆಯ್ಕೆಯನ್ನು ಪ್ರಧಾನಿ ನರೇಂದ್ರ ಮೋದಿಯಾಗಲಿ, ಗೃಹ ಸಚಿವ ಅಮಿತ್ ಶಾ ಆಗಲಿ, ಅಮಿತ್ ಶಾ ಮಗ ಜೈ ಶಾ ಆಗಲಿ ಅಥವಾ ಮುಖೇಶ್ ಅಂಬಾನಿ ಆಗಲಿ ಮಾಡುತ್ತಿಲ್ಲ.
ಐಪಿಎಲ್ ನಲ್ಲಿ ಆಡಬೇಕಾದ್ರೆ ಕೆಲವೊಂದು ನಿಯಮಗಳಿವೆ. ಈ ನಿಯಮಗಳ ಪ್ರಕಾರ ಅರ್ಹತೆ ಪಡೆದುಕೊಂಡ್ರೆ ಮಾತ್ರ ಹರಾಜಿನಲ್ಲಿ ಆಟಗಾರರು ಭಾಗಿಯಾಗಬಹುದು. ಆ ನಂತರ ಐಪಿಎಲ್ ಫ್ರಾಂಚೈಸಿಗಳು ತಮ್ಮ ತಂಡಕ್ಕೆ ಆಟಗಾರರನ್ನು ಆಯ್ಕೆ ಮಾಡಿಕೊಂಡಿರುತ್ತಾರೆ. ಅಲ್ಲಿ ಯಾವ ಮೋದಿಯೂ ಬರಲ್ಲ. ಅಮಿತ್ ಶಾ ನೂ ಬರಲ್ಲ.. ಅಂಬಾನಿಯೂ ಬರಲ್ಲ..!

ಹಾಗೇ ಸ್ಥಳೀಯ ಫ್ರಾಂಚೈಸಿಗಳು ಸ್ಥಳೀಯ ಯುವ ಆಟಗಾರರಿಗೆ ಅವಕಾಶ ನೀಡಬೇಕು. ಆದ್ರೆ ಕೆಲವೊಂದು ಸಂದರ್ಭದಲ್ಲಿ ಅದು ಸಾಧ್ಯವಾಗುವುದಿಲ್ಲ. ಹಾಗೇ ನೋಡಿದ್ರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಷ್ಟು ಮಂದಿ ಕನ್ನಡಿಗರಿಗೆ ಅವಕಾಶ ನೀಡಿದೆ. ಆರ್ ಸಿಬಿ ಐಪಿಎಲ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರೂ ನಮ್ಮ ಕನ್ನಡದ ಆಟಗಾರರು ಬೇರೆ ಫ್ರಾಂಚೈಸಿಗಳಲ್ಲಿ ಆಡುವಂತಹ ಪರಿಸ್ಥಿತಿ ಇದೆ. ಯಾಕಂದ್ರೆ ಇದು ಫ್ರಾಂಚೈಸಿಗಳಿಗೆ ಬಿಟ್ಟ ವಿಚಾರವಾಗಿದೆ.
arjun tendulkar sachin tendulkar ipl 2021 saakshatvಅದು ಏನೇ ಇರಲಿ, ಅರ್ಜುನ್ ತೆಂಡುಲ್ಕರ್ ವಿವಿಧ ವಯೋಮಿತಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡದಿದ್ರೂ ಗಮನ ಸೆಳೆಯುವಂತಹ ಪ್ರದರ್ಶನ ನೀಡಿದ್ದಾರೆ. ಮುಂಬೈ ತಂಡದ ಪರ ವಿವಿಧ ವಯೋಮಿತಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಆದ್ರೆ ಅರ್ಜುನ್ ತೆಂಡುಲ್ಕರ್ ಕೆರಿಯರ್ ಗೆ ಸಚಿನ್ ತೆಂಡುಲ್ಕರ್ ಅನ್ನೋ ಟ್ಯಾಗ್ ಲೈನ್ ಮಾರಕವಾಗಿ ಪರಿಣಮಿಸುತ್ತಿದೆ.
ಅರ್ಜುನ್ ತೆಂಡುಲ್ಕರ್ ಗೆ 20 ಲಕ್ಷ ರೂಪಾಯಿ ಬೇಸಿಕ್ ಪ್ರೈಸ್ ಆಗಿದೆ. ಆಲ್ ರೌಂಡರ್ ಆಗಿರುವ ಅರ್ಜುನ್ ತೆಂಡುಲ್ಕರ್ ಗೆ ಇನ್ನಷ್ಟು ಕಲಿಯಲು ಐಪಿಎಲ್ ಉತ್ತಮ ವೇದಿಕೆಯಾಗಿದೆ.
ಒಂದಂತೂ ನಿಜ, ಅರ್ಜುನ್ ತೆಂಡುಲ್ಕರ್ ಮುಂಬೈ ಇಂಡಿಯನ್ಸ್ ತಂಡದ ಪರ ಆಡುವಂತಹ ಸಾಧ್ಯತೆಗಳಿವೆ. ಯಾಕಂದ್ರೆ ಒಂದು ಅಂಬಾನಿ ತಂಡ, ಸಚಿನ್ ತೆಂಡುಲ್ಕರ್ ಕೂಡ ಮುಂಬೈ ಇಂಡಿಯನ್ಸ್ ತಂಡದ ಮೆಂಟರ್ ಆಗಿದ್ದಾರೆ. ಹಾಗೇ ಸ್ಥಳೀಯ ಆಟಗಾರನು ಆಗಿದ್ದಾರೆ.
ಆದ್ರೆ ಅರ್ಜುನ್ ತೆಂಡುಲ್ಕರ್ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ರೆ ಆರೋಪಗಳು, ಟೀಕೆಗಳು ಬರಬಹುದು ಅನ್ನೋ ಕಾರಣಕ್ಕೆ ಬೇರೆ ಫ್ರಾಂಚೈಸಿಗಳು ಖರೀದಿ ಮಾಡಿದ್ರೂ ಅಚ್ಚರಿ ಏನಿಲ್ಲ. ಹಾಗೇ ಬಿಡ್ಡಿಂಗ್ ನಲ್ಲಿ ಯಾರು ಕೂಡ ಖರೀದಿ ಮಾಡದೇ ಇರಬಹುದು. ಆಗ ಮಾತ್ರ ಸಚಿನ್ ತೆಂಡುಲ್ಕರ್ ಗೆ ಅವಮಾನವಾಗಬಹುದು.
ಒಟ್ಟಿನಲ್ಲಿ ಅರ್ಜುನ್ ತೆಂಡುಲ್ಕರ್ ಐಪಿಎಲ್ ಗೆ ಎಂಟ್ರಿಯಾಗಿರುವುದಕ್ಕೆ ಸಚಿನ್ ತೆಂಡುಲ್ಕರ್ ಗೆ ಸಾಮಾಜಿಕ ಜಾಲ ತಾಣದಲ್ಲಿ ಬೌನ್ಸರ್, ಗೂಗ್ಲಿಯಂತಹ ಮಾರಕ ಪ್ರಶ್ನೆಗಳು, ಟೀಕೆಗಳಿಗೆ ಕೇಳಿಬರಹುದು.

Tags: #saakshatvamith shaArjun TendulkarbcciIPLipl 2021IPL auctionmukhesh ambanimumbai indianspm narendra modiSachin Tendulkar
ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram