ಆರ್ಮುಗಂ ರವಿಶಂಕರ್ ಕೇವಲ ನಟರಷ್ಟೇ ಅಲ್ಲ. ಡೈರೆಕ್ಟರ್, ರೈಟರ್, ಸಿಂಗರ್, ವಾಯ್ಸ್ ಓವರ್ ಆರ್ಟಿಸ್ಟ್ ಇದ್ದಾರೆ.
ಕಿಚ್ಚ ಸುದೀಪ್ (Sudeep) ನಟನೆಯ ‘ಕೆಂಪೇಗೌಡ’ (Kempegowda) ಸಿನಿಮಾದಲ್ಲಿ ಆರ್ಮುಗಂ ಪಾತ್ರದಲ್ಲಿ ನಟಿಸುವ ನಟ ರವಿಶಂಕರ್ ಸಾಕಷ್ಟು ಹೆಸರು ಪಡೆದಿದ್ದಾರೆ. ಈ ಚಿತ್ರ ಅವರಿಗೆ ನೇಮು-ಫೇಮು-ಕ್ರೇಜು-ಕಾಸು ಹೀಗೆ ಎಲ್ಲವನ್ನೂ ತಂದು ಕೊಟ್ಟಿತು. ಹೀಗಾಗಿ ಅವರಿಗೆ ಬೇಡಿಕೆ ಹೆಚ್ಚಾಯಿತು. ಈಗ ಮಗನಿಗಾಗಿ ಕ್ಯಾಪ್ ತೊಟ್ಟಿದ್ದಾರೆ ಎಂಬ ಮಾತು ಹರಿದಾಡುತ್ತಿದೆ.
ಈಗ ರವಿಶಂಕರ್ ಮತ್ತೆ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಕಳೆದ 20 ವರ್ಷಗಳ ಹಿಂದೆ ಆ್ಯಕ್ಷನ್ ಕ್ವೀನ್ ಮಾಲಾಶ್ರೀಗೆ ಮೊದಲ ಭಾರಿ ಆ್ಯಕ್ಷನ್ ಕಟ್ ಹೇಳಿದ್ದರು. ‘ದುರ್ಗಿ’ ಸಿನಿಮಾ ಡೈರೆಕ್ಷನ್ ಮಾಡುವ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದರು. ರವಿಶಂಕರ್ಗೆ ಈ ಚಿತ್ರದಿಂದ ಒಳ್ಳೆಯ ಹೆಸರು ಬಂದಿತ್ತು. ಆನಂತರ ಅವರು ಕ್ಯಾಪ್ ತೊಟ್ಟಿರಲಿಲ್ಲ. ಈಗ 20 ವರ್ಷಗಳ ನಂತರ ಹ್ಯಾಟ್ ತೊಡಲು ರೆಡಿಯಾಗಿದ್ದಾರೆ.
ರವಿಶಂಕರ್ ಅವರ ಮಗ ಅದ್ವಯ್ ಶಂಕರ್ (Adhvay Shankar) ವಿದೇಶದಲ್ಲಿ ನಟನಾ ತರಬೇತಿ ಪಡೆದುಕೊಂಡಿದ್ದಾರೆ. ವಿದ್ಯಾಭ್ಯಾಸವೆಲ್ಲ ಮುಗಿಸಿ ವಾಪಾಸ್ ಹುಟ್ಟೂರಿಗೆ ಮರಳಿರುವ ಮಗನನ್ನು ಬಣ್ಣದ ಜಗತ್ತಿಗೆ ಪರಿಚಯಿಸಲು ಮುಂದಾಗಿದ್ದಾರೆ.
ತಾತನಂತೆ, ಅಪ್ಪ-ಚಿಕ್ಕಪ್ಪರಂತೆ ಕಲೆ ರಕ್ತಗತವಾಗಿ ಬಂದಿರುವುದರಿಂದ ಮುಖಕ್ಕೆ ಬಣ್ಣ ಹಚ್ಚಲು ಅದ್ವಯ್ ಕೂಡ ಮುಂದಾಗಿದ್ದಾರೆ. ತ್ರನ ಚೊಚ್ಚಲ ಚಿತ್ರಕ್ಕೆ ತಾವೇ ಆ್ಯಕ್ಷನ್ ಕಟ್ ಹೇಳಲು ಮುಂದಾಗಿದ್ದಾರೆ. ನಟ ಕಮ್ ನಿರ್ದೇಶಕ ರವಿಶಂಕರ್. ಈ ಚಿತ್ರಕ್ಕೆ ‘ಸುಬ್ರಹ್ಮಣ್ಯ’ (Subrahmanya Film) ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.