ಶ್ರೀನಗರ: ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಬಲಿ ಪಡೆದಿರುವ ಘಟನೆ ನಡೆದಿದೆ.
ಸೇನೆಯ ವಿಶೇಷ ಪಡೆಗಳು, ಜಮ್ಮು ಮತ್ತು ಕಾಶ್ಮೀರ (Jammu & Kashmir) ಪೊಲೀಸರು ಬುಧವಾರ ಕಥುವಾ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರನ್ನು ಬಲಿ ಪಡೆದಿದೆ.
ಅಲ್ಲದೇ, ಇನ್ನೂ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಇಬ್ಬರು ಉಗ್ರರ ಮೃತದೇಹಗಳು ಪತ್ತೆಯಾಗಿವೆ ಎಂದು ಸೇನಾ ಮೂಲಗಳು ಹೇಳಿವೆ. ಉಗ್ರರು ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೆ.18 ರಿಂದ ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಅಹಿತಕರ ಘಟನೆ ನೆಡಸಲು ಉಗ್ರರು ಸಂಚು ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಯಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಯೋಧ ಗಾಯಗೊಂಡಿದ್ದಾರೆ.
ಸೇನಾಪಡೆಗಳು ಕಟ್ಟೆಚ್ಚರದಲ್ಲಿವೆ ಎಂದು ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಕಾಯುವ ಬಿಎಸ್ಎಫ್ ಹೇಳಿದೆ.








