ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Bengaluru: 12 ವರ್ಷಗಳಿಂದ ಕಳ್ಳತನ ಮಾಡುತ್ತಿದ್ದ ಖತರ್ನಾಕ್​ ಕಳ್ಳ ಅರೆಸ್ಟ್

Vivek Biradar by Vivek Biradar
February 1, 2022
in Hale Mysore, Newsbeat, ಹಳೇ ಮೈಸೂರು
Arrest is a thief who has been stealing for 12 years Saaksha Tv
Share on FacebookShare on TwitterShare on WhatsappShare on Telegram

12 ವರ್ಷಗಳಿಂದ ಕಳ್ಳತನ ಮಾಡುತ್ತಿದ್ದ ಖತರ್ನಾಕ್​ ಕಳ್ಳ ಅರೆಸ್ಟ್ Saaksha Tv

ಬೆಂಗಳೂರು: ಮಕ್ಕಳನ್ನು ಶಾಲೆಗೆ ಬಿಡಲು ಹಾಗೂ ಕರೆತರಲು ಬೀಗ ಹಾಕಿಕೊಂಡು ಹೋಗುವ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಘಟನೆ  ಹೆಬ್ಬಾಳ, ಅರ್.ಟಿ.ನಗರ ಹಾಗೂ ಡಿ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Related posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

March 18, 2026
ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

March 18, 2026

ಬೆಳಗ್ಗೆ ಮಕ್ಕಳನ್ನು ಶಾಲೆಗೆ ಬಿಡಲು ಹಾಗೂ ಸಂಜೆ ಕರೆತರಲು ಪೋಷಕರು ಶಾಲೆಗೆ ಹೋಗುವ ಅವಧಿಯಲ್ಲಿ ಬೀಗ ಹಾಕಿದ ಮನೆಗಳನ್ನೇ ಗುರುತಿಸಿಕೊಳ್ಳುತ್ತಿದ್ದ. ಮಹಿಳೆಯರು‌‌ ಬೀಗದ‌ ಕೀಯನ್ನು ಕೈಯಲ್ಲಿ ಇಟ್ಟುಕೊಳ್ಳುವುದು ಸಾಮಾನ್ಯ. ಈ ವೇಳೆ ಖದೀಮ ದೂರದಿಂದಲೇ ಬೀಗದ‌ ಕೀ ಗಾತ್ರವನ್ನು‌ ಕಣ್ಣಲ್ಲೇ ಅಳತೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಬ್ಬಾಳ, ಅರ್.ಟಿ.ನಗರ ಹಾಗೂ ಡಿ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 12 ವರ್ಷಗಳಿಂದ ಕಳ್ಳತನ ಮಾಡುತ್ತಿದ್ದರೂ ಸಣ್ಣ ಸುಳಿವು ನೀಡದೆ ಚಾಕಚಕ್ಯತೆ ಮೆರೆದಿದ್ದ. ಕಾವಲ್ ಬೈರಸಂದ್ರ ನಿವಾಸಿಯಾಗಿರುವ ಮುರುಳಿ ಆಲಿಯಾಸ್ ಪ್ರಾಜೆಕ್ಟ್ 7ನೇ ತರಗತಿ ವ್ಯಾಸಂಗ ಮಾಡಿದರೂ ಸಾಫ್ಟ್​ವೇರ್ ಇಂಜಿನಿಯರ್ ಎಂದು ಹೇಳಿಕೊಂಡು ಓಡಾಡುತ್ತಿದ್ದ.

Arrest is a thief who has been stealing for 12 years Saaksha Tv

ಸಧ್ಯ ಖತರ್ನಾಕ್​ ಕಳ್ಳತನ ಆರೋಪಿಯನ್ನು ಹೆಬ್ಬಾಳ ಹಾಗೂ ಆರ್.ಟಿ. ನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಅಲ್ಲದೇ, 51 ಲಕ್ಷ ಮೌಲ್ಯದ ಒಂದೂವರೆ ಕೆ.ಜಿ. ಮೌಲ್ಯದ ಚಿನ್ನ, ಬೆಳ್ಳಿಯನ್ನು ಜಪ್ತಿ ಮಾಡಲಾಗಿದೆ. ಮುರುಳಿ ಬಂಧಿತ ಆರೋಪಿಯಾಗಿದ್ದು, 2011ರಿಂದಲೂ‌ ನಡೆದ ಮನೆಗಳ್ಳತನ ಕೃತ್ಯಗಳಿಗೆ ಮಾಸ್ಟರ್ ಮೈಂಡ್ ಆಗಿದ್ದ ಎಂದು ಹೇಳಿದ್ದಾರೆ.

ಆರೋಪಿ ಮುರುಳಿ ಆರಂಭದಲ್ಲಿ ಪತ್ನಿಗೂ ತನ್ನ ಕೆಲಸದ ಬಗ್ಗೆ ಹೇಳಿರಲಿಲ್ಲ. ಪೊಲೀಸರಿಗೆ ಸಿಕ್ಕಿ  ಬೀಳದಿರಲು ಆಧಾರ್ ಕಾರ್ಡ್ ಸಹ ಮಾಡಿಸಿಕೊಂಡಿರಲಿಲ್ಲ. ಆಧಾರ್ ಕಾರ್ಡ್ ಮಾಡಿಸಬೇಕಾದರೆ ಫಿಂಗರ್ ಪ್ರಿಂಟ್ ನೀಡಬೇಕು.‌ ಒಂದು ವೇಳೆ ಬೆರಳಚ್ಚು ನೀಡಿದರೆ ಪೊಲೀಸರು ತನಿಖೆ ನಡೆಸಿ ಬಂಧಿಸುತ್ತಾರೆ ಎಂಬ ಭೀತಿಯಿಂದ ಆಧಾರ್ ಕಾರ್ಡ್ ಮಾಡಿಸಿರಲಿಲ್ಲ ಎಂದು ತಿಳಿದುಬಂದಿದೆ.

ಕಳ್ಳತನ ಕೃತ್ಯಕ್ಕೆ ಪ್ರಾಜೆಕ್ಟ್ ಎಂದು ಕೋಡ್ ವರ್ಡ್ ಬಳಸುತ್ತಿದ್ದ. ಕದ್ದ ಚಿನ್ನಾಭರಣವನ್ನು‌ ಪರಿಚಯಸ್ಥ ಜ್ಯುವೆಲ್ಲರಿ‌ ಶಾಪ್​ಗಳಿಗೆ ಮಾರಾಟ ಮಾಡಿ ಜೀವನ ನಡೆಸುತ್ತಿದ್ದ ಎಂದು‌ ನಗರ ಉತ್ತರ ವಿಭಾಗದ ಡಿಸಿಪಿ ವಸಂತ ವಿನಾಯಕ್ ಪಾಟೀಲ್ ತಿಳಿಸಿದ್ದಾರೆ. ಇದೀಗ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ‌‌‌ ಒಪ್ಪಿಸಲಾಗಿದೆ‌.

Tags: #Saaksha TVCrimepolice
ShareTweetSendShare
Join us on:

Related Posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram