ಮತ್ತೊಬ್ಬ ಹಿಂದು ಕಾರ್ಯಕರ್ತನ ಕೊಲೆಗೆ ಸಂಚು ರೂಪಿಸಿದ್ದ ಆರೋಪಿಗಳ ಬಂಧನ
ಶಿವಮೊಗ್ಗ: ಮತ್ತೊಬ್ಬ ಹಿಂದು ಕಾರ್ಯಕರ್ತನ ಹತ್ಯಗೆ ಸಂಚು ರೂಪಿಸಿದ್ದ ಮೂವರು ಯುವಕರನ್ನು ಶಿವಮೊಗ್ಗಾದ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅನ್ಯಕೋಮಿನ ಸಲ್ಮಾನ್, ಅಬ್ಬಾಸ್, ಉಸ್ಮಾನ್ ಬಂಧಿತ ಆರೋಪಿಗಳು. ಯುವಕರು ಹಿಂದೂಪರ ಸಂಘಟಿತ ಕಾರ್ಯಕರ್ತ ಭರತ್ ಎಂಬಾತನ ಕೊಲೆಗೆ ಸಂಚು ರೂಪಿಸಿದ್ದರು. ಈ ಮೂವರ ಗುಂಪು ನಗರದ ನ್ಯೂ ಮಂಡ್ಲಿ ಬಡಾವಣೆ ಬಳಿ ಭರತ್ ಸಹೋದರನನ್ನು ಅಡ್ಡ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ಭರತ್ ಎಲ್ಲಿದ್ದಾನೆ ಎಂಬುದರ ಬಗ್ಗೆ ಪ್ರಶ್ನಿಸಿದ್ದಾರೆ.
ಈ ಕುರಿತು ಭರತ್ ಸಹೋದರ ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ. ಕಾರ್ಯ ಪ್ರವೃತ್ತರಾದ ಪೊಲೀಸರಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರ ತುರ್ತು ಕಾರ್ಯಾಚರಣೆಯಿಂದ ಹತ್ಯೆಯ ಸಂಚು ವಿಫಲವಾಗಿವೆ.