ಮಂಗಳೂರು: ಕಾವೇರಿ-2.0 ಹ್ಯಾಕ್ ಮಾಡಿ ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಹಣ ಎಗರಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ದೀಪಕ್ ಕುಮಾರ್ ಹೆಂಬ್ರಮ್, ವಿವೇಕ್ ಕುಮಾರ್ ಬಿಶ್ವಾಸ್, ಮದನ್ ಕುಮಾರ್ ಬಂಧಿತ ಆರೋಪಿಗಳು ಎನ್ನಲಾಗಿದೆ. ಆಧಾರ್ ಎನೇಬಲ್ಡ್ ಪೇಮೆಂಟ್ ಸಿಸ್ಟಮ್ ಮೂಲಕ ಹಣ ಎಗರಿಸುತ್ತಿದ್ದರು ಎನ್ನಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯ ನೋಂದಣಿದಾರರ ಹಣವನ್ನು ಈ ದುಷ್ಕರ್ಮಿಗಳು ತಮ್ಮ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದರು ಎನ್ನಲಾಗಿದೆ. ಬಂಧಿತ ಆರೋಪಿಗಳು ಕಾವೇರಿ-2.0 ವೆಬ್ಸೈಟ್ನ್ನೇ ಹ್ಯಾಕ್ ಮಾಡಿದ್ದರು ಎನ್ನಲಾಗಿದೆ.
ಬ್ಯಾಂಕ್ ಖಾತೆಯಲ್ಲಿ ಒಟ್ಟು 3.6 ಲಕ್ಷ ರೂ. ಪತ್ತೆಯಾಗಿದೆ ಎನ್ನಲಾಗಿದೆ.