ಬೆಳಗಾವಿ: ಜೈ ಮಹಾರಾಷ್ಟ್ರ’ ಎಂದು ಬರೆದು ಪುಂಡಾಟಿಕೆ ಮೆರೆದಿದ್ದ ನಾಡದ್ರೋಹಿಗಲನ್ನು ಪೊಲೀಸರು ಬಂಧಿಸಿದ್ದಾರೆ.
ಎಂಇಎಸ್ನ ಶುಭಂ ಶಳಕೆ ಸೇರಿದಂತೆ ಮೂವರು ಕಳೆದ ಎರಡು ದಿನಗಳ ಹಿಂದೆ ಉದ್ಯಮಿ ಶ್ರೀಕಾಂತ್ ದೇಸಾಯಿ ಎಂಬುವವರ ಕಾರ್ಖಾನೆ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದಿದ್ದರು. ಹೀಗಾಗಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ನಿಟ್ಟಿನಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿಯಲ್ಲಿ ಕುಸ್ತಿ ಅಖಾಡದಲ್ಲೂ ಕುಸ್ತಿಪಟುವೋರ್ವ ‘ಜೈ ಮಹಾರಾಷ್ಟ್ರ’ ಎಂದಿದ್ದ. ಈ ಸಂದರ್ಭದಲ್ಲಿ ಉದ್ಯಮಿ ಶ್ರೀಕಾಂತ್ ದೇಸಾಯಿ ಕುಸ್ತಿಪಟುಗೆ ಬುದ್ಧಿ ಹೇಳಿ, ‘ಜೈ ಕರ್ನಾಟಕ ಹೇಳುವಂತೆ’ ಸಲಹೆ ನೀಡಿದ್ದರು. ಇದನ್ನು ವಿರೋಧಿಸಿ ಕಾರ್ಖಾನೆ ಮೇಲೆ ದಾಳಿ ನಡೆಸಿ ಫ್ಲೆಕ್ಸ್ ಹರಿದಿದ್ದರು. ಗೋಡೆ ಬರಹ ಕೂಡ ಬರೆದಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೂಡಲೇ ಎಚ್ಚೆತ್ತ ಡಿಸಿಪಿ ರೋಹನ್ ಜಗದೀಶ್ ಸೂಚನೆ ಮೇರೆಗೆ ಮೂವರು ನಾಡದ್ರೋಹಿಗಳನ್ನು ಬಂಧಿಸಲಾಗಿದೆ.