ಪಂಜಾಬ್ ಚುನಾವಣೆ – ಸಿ ಎಂ ಆಭ್ಯರ್ಥಿ ಘೋಷಿಸಿದ ಆಪ್ ಪಕ್ಷ…
ಪಂಜಾಬ್ ವಿಧಾನಸಭಾ ಚುನಾವಣೆಯನ್ನ ಗಂಭಿರವಾಗಿ ಪರಿಗಣಿಸಿರುವ ಆಪ್ ಪಕ್ಷ ಭರ್ಜರಿಯಾಗಿ ತಯಾರಿ ನಡೆಸುತ್ತಿದೆ. ಸಿ ಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಚುನಾವಣೆಯನ್ನ ಎದುರಿಸಲು ಅದ್ದೂರಿ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ.
ಎಲ್ಲಾ ಪಕ್ಷಗಳಿಗಿಂತ ಒಂದು ಹೆಜ್ಜೆ ಮುಂದೆ ಇಟ್ಟಿರುವ ಆಪ್ ಪಂಜಾಬ್ ಸಿ ಎಂ ಅಭ್ಯರ್ಥಿಯ ಹೆಸರನ್ನ ಘೋಷಿಸಿದೆ. ಮೊಹಾಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಪಂಜಾಬ್ ಸಿಎಂ ಅಭ್ಯರ್ಥಿಯಾಗಿ ಸಂಗ್ರೂರ್ ಕ್ಷೇತ್ರದ ಸಂಸದ ಭಗವಂತ್ ಮಾನ್ ಅವರ ಹೆಸರನ್ನ ಪ್ರಸ್ತಾಪಿಸಿದ್ದಾರೆ.
ಆಪ್ ಪಕ್ಷ ಪಂಜಾಬ್ ನ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಕುರಿತು ಪೋನ್ ಸಮೀಕ್ಷೆ ನಡೆಸಿತ್ತು. ಜನವರಿ 17 ರಂದು ವಾಟ್ಸಪ್ ಮತ್ತು ಟೆಕ್ಸ್ಟ್ ಮಸೆಜ್ ಗಳ ಮೂಲಕ ಸಿ ಎಂ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಜನತೆ ಅಭಿಪ್ರಾಯ ಹಮಚಿಕೊಳ್ಳಲು ಅವಕಾಶ ಮಾಡಿಕೊಟ್ಟಿತ್ತು.








