ಡಿ.ಕೆ. ಶಿವಕುಮಾರ್ ಅವರೇ ಬಂಡತನದ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಿ : ಅಶ್ವಥ್ ನಾರಾಯಣ್ Ashwath Narayan vs d k shivakumar mekedatu padayatre saaksha tv
ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರೇ, ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ದೇಶದ ಭವಿಷ್ಯವನ್ನು ದುರ್ಬಳಕೆ ಮಾಡಿಕೊಳ್ಳಬೇಡಿ. ಬಂಡತನದ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಿ ಎಂದು ಸಚಿವ ಅಶ್ವಥ್ ನಾರಾಯಣ್ ಕಿಡಿಕಾರಿದ್ದಾರೆ.
ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂದಾಳತ್ವದಲ್ಲಿ ಈ ಪಾದಯಾತ್ರೆ ನಡೆಯುತ್ತಿದ್ದು, ಡಿಕೆಶಿ ಪಾದಯಾತ್ರೆ ವೇಳೆ ಶಾಲೆಗೆ ಭೇಟಿ ನೀಡಿದ್ದರು.
ಈ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಅಶ್ವಥ್ ನಾರಾಯಣ್, ಕೋವಿಡ್ ಪ್ರಕರಣ ಕಡಿಮೆ ಇರುವ ರಾಮನಗರದಲ್ಲಿ #ಸುಳ್ಳಿನಜಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಶಾಲಾ ಮಕ್ಕಳಿಗೂ ಕೋವಿಡ್ ಹರಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಅಲ್ಲದೇ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ದೇಶದ ಭವಿಷ್ಯವನ್ನು ದುರ್ಬಳಕೆ ಮಾಡಿಕೊಳ್ಳಬೇಡಿ. ಬಂಡತನದ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಿ ಎಂದು ಕುಟುಕಿದ್ದಾರೆ.