ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶತಮಾನದ ದಾಖಲೆ ಬರೆದ ಸ್ಪಿನ್ ಮಾಂತ್ರಿಕ ಆರ್. ಅಶ್ವಿನ್…

admin by admin
February 9, 2021
in Newsbeat, Sports, ಕ್ರೀಡೆ
R ASHWIN team india saakshatv
Share on FacebookShare on TwitterShare on WhatsappShare on Telegram

ಶತಮಾನದ ದಾಖಲೆ ಬರೆದ ಸ್ಪಿನ್ ಮಾಂತ್ರಿಕ ಆರ್. ಅಶ್ವಿನ್…

R ASHWIN team india saakshatv virat kohliಅದು ಚೆನ್ನೈ ಟೆಸ್ಟ್ ಪಂದ್ಯ. ಲಂಚ್ ಬ್ರೇಕ್ ಗೆ ಎರಡು ಓವರ್ ಗಳಿದ್ದವು. ಅಷ್ಟರಲ್ಲಿ ಇಂಗ್ಲೆಂಡ್ ನ 578 ರನ್ ಗಳಿಗೆ ಉತ್ತರವಾಗಿ ಟೀಮ್ ಇಂಡಿಯಾ 337 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತ್ತು.
ಆದ್ರೆ ಟೀಮ್ ಇಂಡಿಯಾ ಫಾಲೋ ಆನ್ ಗೆ ಸಿಲುಕಿದ್ರೂ ಇಂಗ್ಲೆಂಡ್ ಫಾಲೋ ಆನ್ ಹೇರಲಿಲ್ಲ. 241 ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಲು ಇಂಗ್ಲೆಂಡ್ ತಂಡ ಯೋಜನೆಯನ್ನು ಹಾಕಿಕೊಂಡಿತ್ತು.
ಹೌದು, ದಿನಾಂಕ ಫೆಬ್ರವರಿ 8, 2021. ಸಮಯ ಬೆಳಗ್ಗೆ 11 ಗಂಟೆ 14 ನಿಮಿಷ. ಚೆನ್ನೈ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆರಂಭಿಕರಾದ ರೋರಿ ಬನ್ರ್ಸ್ ಮತ್ತು ಡಾಮ್ನಿನಿಕ್ ಸಿಬ್ಲೆ ಪಕ್ಕಾ ಗೇಮ್ ಪ್ಲಾನ್ ಮಾಡಿಕೊಂಡು ಕ್ರೀಸ್ ಗೆ ಆಗಮಿಸಿದ್ದರು.
ಆಗಲೇ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಎದುರಾಳಿ ಬ್ಯಾಟ್ಸ್ ಮೆನ್ ಗಳನ್ನು ಅಚ್ಚರಿಗೊಳಿಸುವಂತಹ ನಿರ್ಧಾರವನ್ನು ತೆಗೆದುಕೊಂಡಿದ್ದರು.
ಇಂಗ್ಲೆಂಡ್ ನ ಆರಂಭಿಕರು ತಮಗೆ ಜಸ್ಪ್ರಿತ್ ಬೂಮ್ರಾ ಅಥವಾ ಇಶಾಂತ್ ಶರ್ಮಾ ಮೊದಲ ಓವರ್ ಅನ್ನು ಎಸೆಯುತ್ತಾರೆ ಅಂತ ಅಂದುಕೊಂಡಿದ್ದರು.
ಆದ್ರೆ ವಿರಾಟ್ ಕೊಹ್ಲಿ ಪ್ಲಾನ್ ಬೇರೆಯಾಗಿತ್ತು. ಆ ಪ್ಲಾನ್ ಏನು ಎಂಬುದು ಟೀಮ್ ಇಂಡಿಯಾ ಆಟಗಾರರಿಗೆ ತಿಳಿದಿರಲಿಲ್ಲ. ಮೊದಲ ಓವರ್ ಅನ್ನು ಎಸೆಯಲು ಅಶ್ವಿನ್ ಗೆ ನೀಡಿದಾಗ ಸ್ವತಃ ಅಶ್ವಿನ್ ಗೂ ಅಚ್ಚರಿಯಾಗಿತ್ತು. ಯಾಕಂದ್ರೆ ಅಶ್ವಿನ್ ಅವರು ಕೂಡ ಮೊದಲ ಓವರ್ ಅನ್ನು ಇಶಾಂತ್ ಶರ್ಮಾ ಎಸೆಯುತ್ತಾರೆ ಅಂತ ಅಂದುಕೊಂಡಿದ್ದರು.
R ASHWIN team india saakshatvಆದ್ರೆ ವಿರಾಟ್ ಕೊಹ್ಲಿ ಅಶ್ವಿನ್ ಮೇಲೆ ಅಪಾರ ನಂಬಿಕೆಯನ್ನಿಟ್ಟುಕೊಂಡಿದ್ದರು. ಆ ನಂಬಿಕೆಯನ್ನು ಉಳಿಸಿಕೊಳ್ಳುವುದು ಕೂಡ ಅಶ್ವಿನ್ ಗೆ ಸವಾಲಾಗಿತ್ತು.
ಹಾಗೇ ಮೊದಲ ಓವರ್ ನ ಮೊದಲ ಎಸೆತದಲ್ಲೇ ಅಶ್ವಿನ್ ಗೆ ವಿಕೆಟ್ ಕೂಡ ಸಿಕ್ಕಿತ್ತು. ಅಶ್ವಿನ್ ಅವರ ಸ್ಪಿನ್ ಎಸೆತ ಹೆಚ್ಚುವರಿಯಾಗಿ ಬೌನ್ಸ್ ಆದಾಗ ರೊರಿ ಬನ್ಸ್ ಅವರ ಬ್ಯಾಟ್ ಗೆ ತಾಗಿದ ಚೆಂಡು ಸ್ಲಿಪ್ ನಲ್ಲಿದ್ದ ಅಜಿಂಕ್ಯಾ ರಹಾನೆ ಕೈ ಸೇರಿಕೊಂಡಿತ್ತು.
ಅಷ್ಟೇ.. ಇಂಗ್ಲೆಂಡ್ ಗೆ ಆಘಾತ…ಟೀಮ್ ಇಂಡಿಯಾದ ಸ್ಪಿನ್ ಮಾಂತ್ರಿಕ ಆರ್. ಅಶ್ವಿನ್ ಶತಮಾನದ ದಾಖಲೆಯ ಬೌಲರ್ ಆಗಿ ಹೊರಹೊಮ್ಮಿದ್ರು.
ಹೌದು ಟೆಸ್ಟ್ ಕ್ರಿಕೆಟ್ ನ ಮೊದಲ ಎಸೆತದಲ್ಲಿ ವಿಕೆಟ್ ಪಡೆದ ವಿಶ್ವದ ಮೂರನೇ ಸ್ಪಿನ್ನರ್ ಎಂಬ ಹೆಗ್ಗಳಕೆಗೆ ಅಶ್ವಿನ್ ಪಾತ್ರರಾದ್ರು.
ಈ ಹಿಂದೆ 1888ರ ಆಶಷ್ ಸರಣಿಯಲ್ಲಿ ಯಾರ್ಕ್ ಶೈರ್ ನ ಸ್ಪಿನ್ನರ್ ಬಾಬಿ ಪೀಲ್ ಅವರು ಮೊದಲ ಎಸೆತದಲ್ಲಿ ವಿಕೆಟ್ ಪಡೆದಿದ್ರು. ಆದಾದ ನಂತರ 1907ರಲ್ಲಿ ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಬರ್ಟ್ ವೊಲ್ಗರ್ ಅವರು ಇಂಗ್ಲೆಂಡ್ ನ ಟಾಮ್ ಹೈವಾರ್ಡ್ ಅವರನ್ನು ಔಟ್ ಮಾಡಿದ್ದರು. ಇದೀಗ ಟೆಸ್ಟ್ ಕ್ರಿಕೆಟ್ ನಲ್ಲಿ ಅಶ್ವಿನ್ ಅವರು ಈ ಸಾಧನೆ ಮಾಡಿದ್ದಾರೆ.
ಇಂಗ್ಲೆಂಡ್ ತಂಡದ ರನ್ ದಾಹಕ್ಕೆ ಬ್ರೇಕ್ ಹಾಕಿದ್ದ ಆರ್. ಅಶ್ವಿನ್ ಅವರು ಎರಡನೇ ಇನಿಂಗ್ಸ್ ನಲ್ಲಿ ಆರು ವಿಕೆಟ್ ಉರುಳಿಸಿದ್ದರು. ಒಟ್ಟಾರೆ ಚೆನ್ನೈ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ 9 ವಿಕೆಟ್ ಪಡೆದುಕೊಂಡ್ರು. ಅಲ್ಲದೆ 28 ಬಾರಿ ಐದು ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದರು. ಈ ಮೂಲಕ ತನ್ನ ಟೆಸ್ಟ್ ಕ್ರಿಕೆಟ್ ನ ವಿಕೆಟ್ ಗಳ ಸಂಖ್ಯೆಯನ್ನು 386ಕ್ಕೇರಿಸಿಕೊಂಡಿದ್ದಾರೆ. ಅಂದ ಹಾಗೇ ಅಶ್ವಿನ್ 75ನೇ ಟೆಸ್ಟ್ ಪಂದ್ಯವನ್ನಾಡುತ್ತಿದ್ದಾರೆ.
ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 578 ರನ್ ಹಾಗೂ ಎರಡನೇ ಇನಿಂಗ್ಸ್ ನಲ್ಲಿ 178 ರನ್ ಗಳನ್ನು ಕಲೆ ಹಾಕಿತ್ತು.
ಹಾಗೇ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 337 ರನ್ ಹಾಗೂ ಎರಡನೇ ಇನಿಂಗ್ಸ್ ನಲ್ಲಿ ನಾಲ್ಕನೇ ದಿನದ ಅಂತ್ಯಕ್ಕೆ ಒಂದು ವಿಕೆಟ್ ಕಳೆದುಕೊಂಡು 39 ರನ್ ಗಳಿಸಿದೆ. ಟೀಮ್ ಇಂಡಿಯಾಗೆ ಗೆಲ್ಲಲು 420 ರನ್ ಗಳ ಟಾರ್ಗೆಟ್ ಇದೆ. ಐದನೇ ದಿನ 381 ರನ್ ಗಳ ಅವಶ್ಯಕತೆ ಇದೆ.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
Tags: Ajinkya RahaneBert VoglerBobby PeelChennai testEnglandicc testr.ashwinRory Burnsteam indiatest cricketvirat kohli
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram