Asia Cup 2022 : ಅಫ್ರಿದಿಗೆ ಅಷ್ಟು ಸೀನ್ ಇಲ್ಲ.. ಯೂನಿಸ್ ಗೆ ಇಂಡಿಯನ್ಸ್ ಟಾಂಗ್
ಪಾಕಿಸ್ತಾನ್ ಸ್ಟಾರ್ ಬೌಲರ್ ಶಾಹಿನ್ ಷಾ ಅಫ್ರಿದಿ ಗಾಯದ ಸಮಸ್ಯೆಯಿಂದಾಗಿ ಏಷ್ಯಾಕಪ್ 2022 ಗೆ ದೂರವಾಗಿರೋದು ಗೊತ್ತಿರುವ ವಿಚಾರವೇ.
ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮಾಜಿ ವೇಗಿ ವಕಾರ್ ಯೂನಿಸ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.
ಏಷ್ಯಾಕಪ್ನಿಂದ ಅಫ್ರಿದಿ ಹಿಂದೆ ಸರಿದ ನಂತರ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ ಎಂದಿದ್ದಾರೆ.
ಏತನ್ಮಧ್ಯೆ, ಕಳೆದ ವರ್ಷ ನಡೆದ ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಗೆಲುವಿನಲ್ಲಿ ಶಾಹೀನ್ ಶಾ ಪ್ರಮುಖ ಪಾತ್ರ ವಹಿಸಿದ್ದರು.
ಆ ಪಂದ್ಯದಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯಂತಹ ಪ್ರಮುಖ ಆಟಗಾರರನ್ನು ಪೆವಿಲಿಯನ್ ಗೆ ಕಳುಹಿಸುವ ಮೂಲಕ ಶಾಹೀನ್ ಆಘಾತ ನೀಡಿದ್ದರು. ಆ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಫ್ರಿದಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ್ದರು.
ಈ ಬಗ್ಗೆ ಯೂನಿಸ್ ಟ್ವೀಟ್ ಮಾಡಿದ್ದು, ಶಾಹೀನ್ ಗಾಯದ ಸಮಸ್ಯೆಯಿಂದ ಏಷ್ಯಾಕಪ್ನಿಂದ ಹೊರಗುಳಿದಿರುವುದು ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳಿಗೆ ದೊಡ್ಡ ಪರಿಹಾರವಾಗಿದೆ.
ಆದ್ರೆ ಇದು ಪಾಕಿಸ್ತಾನಕ್ಕೆ ದೊಡ್ಡ ಹೊಡೆತವಾಗಿದೆ. ಆತ ಬೇಗ ಗುಣಮುಖವಾಗಿ ತಂಡಕ್ಕೆ ವಾಪಸ್ ಆಗಬೇಕು ಎಂದು ಬರೆದುಕೊಂಡಿದ್ದಾರೆ.
ಇದಕ್ಕೆ ಭಾರತೀಯ ಅಭಿಮಾನಿಗಳು ಟ್ವಿಟ್ಟರ್ ನಲ್ಲಿ ತಿರುಗೇಟು ನೀಡುತ್ತಿದ್ದಾರೆ. ಆಫ್ರಿದಿಗೆ ಅಷ್ಟು ಸೀನ್ ಇಲ್ಲ. ಮೊದಲು ಏಷ್ಯಕಪ್ ನಲ್ಲಿ ಗೆದ್ದು ತೋರಿಸಿ ಎಂದು ಕಮೆಂಟ್ ಮಾಡುತ್ತಿದ್ದಾರೆ.
ಷ್ಯಾಕಪ್ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್