ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

Shwetha by Shwetha
March 20, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ ಕಾಯುವ ಕಾಯಕ ಮಾಡುತ್ತಲೇ ಆಧ್ಯಾತ್ಮದ ಉತ್ತುಂಗಕ್ಕೇರಿದ ಸಿದ್ದಪುರುಷ ಬಾಳು ಮಾಮಾ, ಮುಂಬರುವ 2026ರ ಅವಧಿಯಲ್ಲಿ ಜಗತ್ತು ಕಾಣಲಿರುವ ಭೀಕರ ಬದಲಾವಣೆಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾದ ಸ್ಪೋಟಕ ಮಾಹಿತಿಯೊಂದು ಹೊರಬಿದ್ದಿದೆ.

ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯ ಪ್ರಕಾರ, ಮುಂಬರುವ ದಿನಗಳು ಭಾರತ ಸೇರಿದಂತೆ ಇಡೀ ವಿಶ್ವಕ್ಕೆ ಕಠಿಣವಾಗಿರಲಿವೆ. ಪ್ರಮುಖವಾಗಿ ಭಾರತ ದೇಶದ ದೊಡ್ಡ ನಾಯಕರೊಬ್ಬರ ಹತ್ಯೆಯಾಗುವ ಸಾಧ್ಯತೆಯಿದೆ ಎಂಬ ಆಘಾತಕಾರಿ ವಿಷಯ ಪ್ರಸ್ತಾಪವಾಗಿದೆ. ಅಷ್ಟೇ ಅಲ್ಲದೆ, ಜಾಗತಿಕ ಮಟ್ಟದಲ್ಲಿ ಮೂರನೇ ಮಹಾಯುದ್ಧ ಭುಗಿಲೇಳುವ ಲಕ್ಷಣಗಳು ಗೋಚರಿಸಲಿದ್ದು, ವಿನಾಶದ ಸರದಿ ನಮ್ಮ ದೇಶದ ಮೇಲೆಯೂ ಬರುವ ಸಂಕೇತಗಳಿವೆ ಎಂದು ಎಚ್ಚರಿಸಲಾಗಿದೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

ಜಾಗತಿಕ ಮಾರುಕಟ್ಟೆಯ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆಯನ್ನು ಈ ಭವಿಷ್ಯವಾಣಿ ತಿಳಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳು ಕೆಲವು ಕಾಲ ಸಂಪೂರ್ಣವಾಗಿ ಮುಚ್ಚಲ್ಪಡುವ ಸನ್ನಿವೇಶ ನಿರ್ಮಾಣವಾಗಲಿದ್ದು, ಇದರ ನೇರ ಪರಿಣಾಮವಾಗಿ ಬೆಲೆ ಏರಿಕೆ ಗಗನಕ್ಕೇರಲಿದೆ. ಸಾಮಾನ್ಯ ಜನರು ಜೀವನ ನಡೆಸುವುದೇ ದುಸ್ತರವಾಗುವ ಮಟ್ಟಕ್ಕೆ ಬೆಲೆಗಳು ಹೆಚ್ಚಾಗುವ ಸಾಧ್ಯತೆಯಿದೆ.

ಸಾರಿಗೆ ವ್ಯವಸ್ಥೆಯ ಮೇಲೂ ಕರಾಳ ಛಾಯೆ ಆವರಿಸಲಿದೆ. ರೈಲು ಮತ್ತು ದೊಡ್ಡ ವಾಹನಗಳ ಭೀಕರ ಅಪಘಾತಗಳು ನಡೆಯುವ ಸಾಧ್ಯತೆಗಳಿದ್ದು, ಸಾವು ನೋವುಗಳು ಹೆಚ್ಚಾಗಲಿವೆ. ಇದಕ್ಕೆ ಪೂರಕವೆಂಬಂತೆ ದೈವಿಕ ಸಂಕೇತಗಳೂ ಸಿಗಲಿದ್ದು, ಪ್ರಸಿದ್ಧ ಕೊಲ್ಲಾಪುರದ ದೇವಿಯ ಕಣ್ಣುಗಳಿಂದ ನೀರು ಬರುವ ಘಟನೆ ಜರುಗಲಿದೆ. ಇದು ಮುಂಬರುವ ಆಪತ್ತಿನ ಮುನ್ಸೂಚನೆಯಾಗಿದೆ ಎಂದು ಭಕ್ತರು ನಂಬಿದ್ದಾರೆ.

ಕಲಿಯುಗದ ಪ್ರಭಾವ ಎಂಬಂತೆ ಸಾಮಾಜಿಕ ಮೌಲ್ಯಗಳು ಕುಸಿಯಲಿವೆ ಎಂದು ಬಾಳು ಮಾಮಾ ನುಡಿದಿದ್ದಾರೆ. ಸಮಾಜದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲಾದ ಅಣ್ಣ-ತಂಗಿಯ ಸಂಬಂಧದ ಮೇಲೆಯೂ ಕಳಂಕ ಬರುವಂತಹ ಹೀನ ಕೃತ್ಯಗಳು ನಡೆಯಲಿವೆ. ಕೇವಲ 12 ವರ್ಷದ ಚಿಕ್ಕ ಬಾಲಕಿಯರು ತಾಯಿಯಾಗುವಂತಹ ದುರ್ಘಟನೆಗಳು ಹೆಚ್ಚಾಗಲಿವೆ. ಜಗತ್ತಿನಲ್ಲಿ ಸತ್ಯವನ್ನು ತುಳಿದು, ಮೋಸ ಮತ್ತು ಅನ್ಯಾಯವೇ ಮೇಲುಗೈ ಸಾಧಿಸಲಿದೆ.

ಬಾಳು ಮಾಮಾ ಅವರ ಭವಿಷ್ಯವಾಣಿಯ ಅತ್ಯಂತ ಭಯಾನಕ ಭಾಗವೆಂದರೆ ಮನುಕುಲದ ಭವಿಷ್ಯ. ಇಂದಿನಿಂದ ಸುಮಾರು 100 ವರ್ಷಗಳ ನಂತರ ಮನುಷ್ಯ ಭೂಮಿಯನ್ನು ಬಿಡುವ ಕಾಲ ಬರಲಿದೆ ಅಥವಾ ಮಾನವ ಕುಲದ ಅಸ್ತಿತ್ವಕ್ಕೆ ದೊಡ್ಡ ಪೆಟ್ಟು ಬೀಳಲಿದೆ ಎಂಬ ಗಂಭೀರ ಎಚ್ಚರಿಕೆಯನ್ನು ನೀಡಲಾಗಿದೆ.

ಅಕ್ಟೋಬರ್ 3, 1892 ರಂದು ಬೆಳಗಾವಿ ಜಿಲ್ಲೆಯ ಅಕ್ಕೋಳ ಗ್ರಾಮದಲ್ಲಿ ಜನಿಸಿದ ಬಾಳು ಮಾಮಾ, ಸತ್ಯ ಮತ್ತು ಸರಳತೆಯೇ ದೈವತ್ವದ ಮಾರ್ಗ ಎಂದು ಸಾರಿದವರು. ರೋಗಿಗಳನ್ನು ಗುಣಪಡಿಸುವುದು ಮತ್ತು ಮಳೆ ಬರಿಸುವಂತಹ ಪವಾಡಗಳ ಮೂಲಕ ಜನಜನಿತರಾಗಿದ್ದ ಅವರು, 1966ರಲ್ಲಿ ಕೊಲ್ಲಾಪುರದ ಆದಮಾಪುರದಲ್ಲಿ ದೈವಾಧೀನರಾದರು. ಇಂದಿಗೂ ಅವರ ಸಮಾಧಿ ಮಂದಿರಕ್ಕೆ ಲಕ್ಷಾಂತರ ಭಕ್ತರು ಹರಿದು ಬರುತ್ತಾರೆ. ಅವರ ನುಡಿದ ಭವಿಷ್ಯ ಎಂದಿಗೂ ಸುಳ್ಳಾಗುವುದಿಲ್ಲ ಎಂಬುದು ಭಕ್ತರ ಬಲವಾದ ನಂಬಿಕೆಯಾಗಿದೆ.

ಪ್ರಸ್ತುತ ಜಗತ್ತಿನಲ್ಲಿ ನಡೆಯುತ್ತಿರುವ ಯುದ್ಧಗಳು, ನೈಸರ್ಗಿಕ ವಿಕೋಪಗಳು ಮತ್ತು ನೈತಿಕ ಕುಸಿತಗಳನ್ನು ಗಮನಿಸಿದರೆ, ಸಂತ ಬಾಳು ಮಾಮಾ ಅವರ ಈ ಭವಿಷ್ಯವಾಣಿ ನಿಜವಾಗಲಿದೆಯೇ ಎಂಬ ಆತಂಕ ಸಾರ್ವಜನಿಕರಲ್ಲಿ ಮನೆಮಾಡಿದೆ.

ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬಿಗ್ ಶಾಕ್: ಪ್ಯಾರಸಿಟಮಾಲ್ ಸೇರಿದಂತೆ ಅಗತ್ಯ ಔಷಧಗಳ ದರ ಏರಿಕೆ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬಿಗ್ ಶಾಕ್: ಪ್ಯಾರಸಿಟಮಾಲ್ ಸೇರಿದಂತೆ ಅಗತ್ಯ ಔಷಧಗಳ ದರ ಏರಿಕೆ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!

by Shwetha
March 20, 2026
0

ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಅಗತ್ಯ ಔಷಧಗಳ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram