ADVERTISEMENT
Sunday, January 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವಿಧಾನಸಭಾ ಉಪ ಚುನಾವಣೆ; 13 ಸ್ಥಾನಗಳ ಪೈಕಿ 10ರಲ್ಲಿ ಇಂಡಿಯಾ ಬಣಕ್ಕೆ ಜಯ

ಬಿಜೆಪಿಗೆ ತೀವ್ರ ಮುಖಭಂಗ

Author2 by Author2
July 13, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಏಳು ರಾಜ್ಯಗಳಲ್ಲಿ ನಡೆದ 13 ವಿಧಾನಸಭಾ ಸ್ಥಾನಗಳ ಉಪಚುನಾವಣೆ (Assembly Bypoll results) ಮತ ಎಣಿಕೆ ಫಲಿತಾಂಶ ಪ್ರಕಟವಾಗಿದ್ದು, ಇಂಡಿಯಾ ಬಣ (INDIA bloc) 10 ಸ್ಥಾನಗಳಲ್ಲಿ ಗೆಲುವು ಕಂಡಿದೆ.

ಅಲ್ಲದೇ, ಬಿಜೆಪಿ (BJP) ಎರಡು ಕ್ಷೇತ್ರಗಳಲ್ಲಿ ಮತ್ತು ಪಕ್ಷೇತರ ಅಭ್ಯರ್ಥಿಯೊಬ್ಬರು ಒಂದು ಕ್ಷೇತ್ರ ಗೆದ್ದಿದ್ದಾರೆ. ಜುಲೈ 10 ರಂದು ಚುನಾವಣೆ ನಡೆದ ವಿಧಾನಸಭಾ ಕ್ಷೇತ್ರಗಳಲ್ಲಿ, ಹಿಮಾಚಲ ಪ್ರದೇಶದ ಡೆಹ್ರಾ ಮತ್ತು ನಲಗಢ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ.

Related posts

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

January 24, 2026
‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

January 24, 2026

ಡೆಹ್ರಾದಲ್ಲಿ ಸಿಎಂ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಬಿಜೆಪಿಯ ಹೋಶ್ಯಾರ್ ಸಿಂಗ್ ವಿರುದ್ಧ 9,399 ಮತಗಳ ಅಂತರದಿಂದ ಗೆದ್ದಿದ್ದಾರೆ. ನಲಗಢ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಹರ್ದೀಪ್ ಸಿಂಗ್ ಬಾವಾ ಅವರು ಬಿಜೆಪಿಯ ಕೆಎಲ್ ಠಾಕೂರ್ ವಿರುದ್ಧ 8,990 ಮತಗಳ ಅಂತರದ ಗೆಲುವು ಕಂಡಿದ್ದಾರೆ.

ಹಮೀರ್‌ಪುರ ಕ್ಷೇತ್ರದಲ್ಲಿ ಬಿಜೆಪಿಯ ಆಶಿಶ್ ಶರ್ಮಾ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನಾಯಕ ಪುಷ್ಪಿಂದರ್ ವರ್ಮಾ ಅವರನ್ನು 1,571 ಮತಗಳ ಅಂತರದಿಂದ ಸೋಲಿಸಿದ್ದಾರೆ. ಉತ್ತರಾಖಂಡದಲ್ಲಿ ಎರಡು ಸ್ಥಾನಗಳಿಗೆ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಲಖಪತ್ ಸಿಂಗ್ ಬುಟೋಲಾ ಬದರಿನಾಥ್‌ನಿಂದ ಗೆದ್ದು, ಬಿಜೆಪಿಯ ರಾಜೇಂದ್ರ ಸಿಂಗ್ ಭಂಡಾರಿ ಅವರನ್ನು 5,224 ಮತಗಳ ಅಂತರದಿಂದ ಸೋಲಿಸಿದ್ದಾರೆ. ಮಂಗಳೂರ್ ಕ್ಷೇತ್ರದಲ್ಲಿ ಬಿಜೆಪಿಯ ಕರ್ತಾರ್ ಸಿಂಗ್ ಭದಾನ 422 ಮತಗಳಿಂದ ಸೋತಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ನಾಲ್ಕು ವಿಧಾನಸಭಾ ಸ್ಥಾನಗಳನ್ನು ಗೆದ್ದಿದೆ. ಅದರ ಅಭ್ಯರ್ಥಿಗಳಾದ ಕೃಷ್ಣ ಕಲ್ಯಾಣಿ ರಾಯಗಂಜ್‌ನಿಂದ, ಮುಕುತ್ ಮಣಿ ಅಧಿಕಾರಿ ರಣಘಾಟ್ ದಕ್ಷಿಣದಿಂದ, ಮಧುಪರ್ಣ ಠಾಕೂರ್ ಬಾಗ್ಡಾದಿಂದ ಮತ್ತು ಸುಪ್ತಿ ಪಾಂಡೆ ಮಾಣಿಕ್ತಾಲಾದಿಂದ ಗೆಲುವು ಕಂಡಿದ್ದಾರೆ.

ತಮಿಳುನಾಡಿನ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದಲ್ಲಿ ದ್ರಾವಿಡ ಮುನ್ನೇಟ್ರ ಕಳಗಂ (ಡಿಎಂಕೆ) ನಾಯಕ ಅಣ್ಣಿಯೂರ್ ಶಿವ ಗೆದ್ದಿದ್ದಾರೆ. ಅಣ್ಣಿಯುರ್ ಶಿವ ಅವರು ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಅಭ್ಯರ್ಥಿ ಅನ್ಬುಮಣಿ ಸಿ ಅವರನ್ನು 6,700ಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ.
ಬಿಜೆಪಿ ಮಧ್ಯಪ್ರದೇಶದ ಅಮರವಾರ ಕ್ಷೇತ್ರದಲ್ಲಿ ಗೆದ್ದುಕೊಂಡಿದೆ.

Tags: Assembly by-election; India won 10 out of 13 seats
ShareTweetSendShare
Join us on:

Related Posts

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

by Shwetha
January 24, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೋಪಕ್ಕೆ ಕೆನಡಾ ಗುರಿಯಾಗಿದೆ. ಗಾಜಾ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಅಂತರರಾಷ್ಟ್ರೀಯ ಶಾಂತಿ ಮಂಡಳಿಗೆ ಸೇರಿಕೊಳ್ಳುವಂತೆ ಕೆನಡಾಕ್ಕೆ...

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

by Shwetha
January 24, 2026
0

‘VB–G RAM G’ ಕಾಯ್ದೆಯ ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜ್ಯಗಳ ಪಟ್ಟಿಗೆ ಇದೀಗ ತಮಿಳುನಾಡು ಕೂಡ ಸೇರ್ಪಡೆಯಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ನಿರ್ಣಯವನ್ನು...

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

by Shwetha
January 24, 2026
0

ಬೆಂಗಳೂರು: ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಅಬ್ಬರಕ್ಕೆ ಸಿಲುಕಿ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತದ ಭೀತಿ ಎದುರಾಗಿರುವಾಗಲೇ, ಭಾರತದ ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್...

ಮತ್ತೆ ಟ್ರೆಂಡ್ ಆಯ್ತು #GoBackModi: ದಕ್ಷಿಣ ಭಾರತ ಪ್ರವಾಸದ ವೇಳೆ ಆನ್‌ಲೈನ್ ವಿರೋಧ

ಮತ್ತೆ ಟ್ರೆಂಡ್ ಆಯ್ತು #GoBackModi: ದಕ್ಷಿಣ ಭಾರತ ಪ್ರವಾಸದ ವೇಳೆ ಆನ್‌ಲೈನ್ ವಿರೋಧ

by Shwetha
January 24, 2026
0

ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಭಾರತದ ರಾಜ್ಯಗಳ ಪ್ರವಾಸ ಕೈಗೊಂಡಿರುವ ಬೆನ್ನಲ್ಲೇ ಸಾಮಾಜಿಕ ಜಾಲತಾಣ X ನಲ್ಲಿ #GoBackModi ಹ್ಯಾಶ್‌ಟ್ಯಾಗ್ ಮತ್ತೆ ಭಾರೀ ಪ್ರಮಾಣದಲ್ಲಿ ಟ್ರೆಂಡಿಂಗ್...

ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

by Shwetha
January 23, 2026
0

ಕೇರಳದ ಗೋವಿಂದಪುರಂ ನಿವಾಸಿ ದೀಪಕ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಾಮಾಜಿಕ ಮಾಧ್ಯಮ ಪ್ರಭಾವಿ ಹಾಗೂ ಯೂಟ್ಯೂಬರ್ ಶಿಮಿತಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram