ಬೆಂಗಳೂರು : ದೇಶದಲ್ಲಿ ಕೊರೊನಾ ಅಬ್ಬರದ ಮಧ್ಯೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ. ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ರಾಜ್ಯಗಳಲ್ಲಿ ವಿವಿಧ ಹಂತಗಳಲ್ಲಿ ಮತದಾನ ನಡೆದಿದ್ದು, ಇಂದು ಮತ ಎಣಿಕೆ ನಡೆಯುತ್ತಿದೆ.
ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಪಶ್ಚಿಮ ಬಂಗಾಳದ 294 ಕ್ಷೇತ್ರಗಳಲ್ಲಿ ಟಿಎಂಸಿ 80 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದು ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಮೋದಿ ಮ್ಯಾಜಿಕ್ ನಡೆಯಲಿದೆಯೋ, ದೀದಿ ಹ್ಯಾಟ್ರಿಕ್ ಬಾರಿಸಲಿದ್ದಾರೆಯೋ? ಎಂದು ಜನರು ಕಾಯುತ್ತಿದ್ದಾರೆ.
ಅಸ್ಸಾಂನಲ್ಲಿ ಬಿಜೆಪಿ 24. ಕಾಂಗ್ರೆಸ್ 12 ಸ್ಥಾನಗಳಲ್ಲಿ ಮುನ್ನೆಡೆ ಸಾಧಿಸಿದ್ದಾರೆ.
ಪುದುಚೇರಿಯಲ್ಲಿ ಎಐಎನ್ ಆರ್ ಸಿ 5 ಸ್ಥಾನಗಳಲ್ಲಿ ಮುನ್ನಡೆ
ತಮಿಳುನಾಡು ಡಿಎಂಕೆ 28 ಸ್ಥಾನ, ಎಡಿಎಂಕೆ 23 ಮುನ್ನಡೆ. ತಮಿಳುನಾಡು ರಾಜ್ಯದಲ್ಲಿ ಎಐಎಡಿಎಂಕೆ ಪಕ್ಷ ಜಯಲಲಿತಾ ನಿಧನದ ಬಳಿಕ ಮೊದಲ ಬಾರಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿ ಆಡಳಿತಾರೂಢ ಎಐಎಡಿಎಂಕೆ ಮತ್ತು ಕಾಂಗ್ರೆಸ್ ರಾಜ್ಯದ ಪ್ರತಿಪಕ್ಷವಾಗಿರುವ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಚುನಾವಣಾ ಕಣಕ್ಕೆ ಇಳಿದಿದೆ.
ಕೇರಳದಲ್ಲಿ ಎಲ್ ಡಿಎಫ್ 70 ಸ್ಥಾನ, ಉಡಿಎಫ್ 46, ಎನ್ ಡಿಎ 1 ಸ್ಥಾನದಲ್ಲಿ ಮುನ್ನಡೆ. ಕೇರಳದಲ್ಲಿ ಕೆಂಪು ಕೋಟೆ ಭದ್ರವಾಗುವ ಸಾಧ್ಯತೆಗಳಿವೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಬಿರುಸಿನ ಪ್ರಚಾರವನ್ನು ನಡೆಸಿತ್ತು.