ವಿಧಾನಸಭೆ ಅಧಿವೇಶನ | ಕಾಂಗ್ರೆಸ್ – ಬಿಜೆಪಿ ವಾಗ್ವಾದ
ಬೆಂಗಳೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸೇರಿದಂತೆ ಹಲವು ಸಮಸ್ಯೆಗಳ ವಿಚಾರವಾಗಿ ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಆಡಳಿತ ಹಾಗೂ ವಿಪಕ್ಷ ಕಾಂಗ್ರೆಸ್ ಭಾರಿ ವಾಗ್ವಾದ ನಡೆಸಿವೆ.
ಜನರ ಸಮಸ್ಯೆ, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ವಾಗ್ಬಾಣಗಳನ್ನು ಬಿಟ್ಟರು.
ಇದಕ್ಕೆ ಪ್ರತಿಯಾಗಿ, ಗದ್ದಲದ ನಡುವೆ ಗುಡುಗಿದ ಸಿಎಂ ಬೊಮ್ಮಾಯಿ, ರಾಷ್ಟ್ರ, ರಾಷ್ಟ್ರೀಯತೆ, ಆರ್ಎಸ್ಎಸ್ ಇವೆಲ್ಲಾ ಒಂದೇ.
ಆರ್ಎಸ್ಎಸ್ ಅಂದ್ರೆ ರಾಷ್ಟ್ರೀಯತೆ. ರಾಷ್ಟ್ರೀಯ ಶಿಕ್ಷಣ ಪಾಲಿಸಿ, ಆರ್ಎಸ್ಎಸ್ ಇದ್ರೂ ತಪ್ಪಿಲ್ಲ ಎಂದು ಕೇಂದ್ರ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.
ಈ ಮಧ್ಯೆ ಕಾಂಗ್ರೆಸ್ ಶಾಸಕರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ರು.
ಗದ್ದಲ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸ್ಪೀಕರ್ ಅವರು ಅಧಿವೇಶನವನ್ನು ಅನಿರ್ದಿಷ್ಠಾವಧಿಗೆ ಮುಂದೂಡಿದರು.