ಸಹಾಯಕ ಪ್ರಾಧ್ಯಾಪಕ ಪ್ರಶ್ನೆಪತ್ರಿಕೆ ಸೋರಿಕೆ | ಕವಿವಿ ಧಾರವಾಡ, ಪ್ರಾಧ್ಯಾಪಕನ ಬಂಧನ
ಬೆಂಗಳೂರು: ಸಹಾಯಕ ಪ್ರಾಧ್ಯಾಪಕ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಪ್ರಧ್ಯಾಪಕನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಸೌಮ್ಯ ಅವರನ್ನು ವಿಚಾರಣೆಗೊಳಪಡಿಸಿದ್ದ ಪೊಲೀಸರು, ಇವರು ನೀಡಿದ ಮಾಹಿತಿ ಮೇರೆಗೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಭೂಗೋಳಶಾಸ್ತ್ರದ ಹಿರಿಯ ಪ್ರಾಧ್ಯಾಪಕನನ್ನು ಮಲ್ಲೇಶ್ವರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧಾರವಾಡ ವಿವಿಧಾರವಾಡ ವಿಶ್ವವಿದ್ಯಾಲಯ ಮೌಲ್ಯಮಾಪನ ವಿಭಾಗದ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗರಾಜ್ ಅವರಿಗೆ ಪ್ರಶ್ನೆಪತ್ರಿಕೆ ತಯಾರಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿತ್ತು.
ಇದರಂತೆ ಪ್ರಶ್ನೆ ಪತ್ರಿಕೆ ಸಿದ್ದಪಡಿಸುವಾಗ ಭೂಗೋಳಶಾಸ್ತ್ರದ ಅತಿಥಿ ಉಪನ್ಯಾಸಕಿಯಾಗಿದ್ದ ಸೌಮ್ಯ ಅವರಿಗೆ ಪ್ರಶ್ನೆಗಳನ್ನು ಸಿದ್ದಪಡಿಸಲು ನಾಗರಾಜ್ ಹೇಳಿದ್ದರಂತೆ. ಇದರಂತೆ 17 ಪ್ರಶ್ನೆಗಳನ್ನ ಸಿದ್ದಪಡಿಸಿ ಸೌಮ್ಯ ನೀಡಿದ್ದರು. ಇದರಲ್ಲಿ 12 ಪ್ರಶ್ನೆಗಳನ್ನು ಉಳಿಸಿಕೊಂಡಿದ್ದರು. ಸದ್ಯ ನಾಗರಾಜ್ ಅವರನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.