ಅಸಿಸ್ಟೆಂಟ್ ಪ್ರೊಫೆಸರ್ ಪ್ರಶ್ನೆ ಪತ್ರಿಕೆ ಸೋರಿಕೆ | ಆರೋಪಿ ಸೌಮ್ಯ ಅರೇಸ್ಟ್
ಬೆಂಗಳೂರು: ಸಹಾಯಕ ಪ್ರಾಧ್ಯಾಪಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸೌಮ್ಯರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸೌಮ್ಯಳನ್ನು ಮೈಸೂರಿನಲ್ಲಿ, ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಸೌಮ್ಯ ಮೊಬೈಲ್ ನಲ್ಲಿ 18 ಪ್ರಶ್ನೆಗಳು ಇದ್ದವು. ಜಿಲ್ಲಾ ಖಜಾನೆಯಿಂದಲೇ ಪೇಪರ್ ಲೀಕ್ ಶಂಕೆ ವ್ಯಕ್ತವಾಗಿದೆ. ಬಂಡಲ್ ಓಪನ್ ಮಾಡಿ ಪ್ರಶ್ನೆಪತ್ರಿಕೆ ಪಡೆದಿರೋ ಅನುಮಾ ಎದ್ದಿದೆ.
ಮಾರ್ಚ್ ನಲ್ಲಿ ನಡೆದ ಸಹಾಯಕ ಪ್ರಧ್ಯಾಪಕ ಹುದ್ದೆಗೆ ಪರೀಕ್ಷೆ ಬರೆದಿದ್ದರು. ಮೈಸೂರಿನ ಕುವೆಂಪು ನಗರದ ಪಿಯುಸಿ ಕಾಲೇಜು ಸೆಂಟರ್ ನಲ್ಲಿ ಪರೀಕ್ಷೆ ಬರೆದಿದ್ದರು. ಪರೀಕ್ಷೆ ಆರಂಭದ 1 ಗಂಟೆ ಮುಂಚಿತವಾಗಿ ಗೆಳತಿ ಒಬ್ಬಳಿಗೆ 18 ಪ್ರಶ್ನೋತ್ತರಗಳ ಮಾಹಿತಿಯನ್ನು ವಾಟ್ಸಪ್ ನಲ್ಲಿ ಕಳುಹಿಸಿದ್ದರು. ಆಕೆಯಿಂದ ಬೆಂಗಳೂರಿನ ರಾಮಕೃಷ್ಣ ಎಂಬುವರಿಗೆ ಮಾಹಿತಿ ಶೇರ್ ಆಗಿತ್ತು.
ಇನ್ನೂ ನಿನ್ನೆ (ಭಾನುವಾರ) ಸರಕಾರಿ ರಜೆ ಹಿನ್ನಲೆ ಪೊಲೀಸರು ನ್ಯಾಯಾಂಗ ವಶಕ್ಕೆ ಒಪ್ಪಿದ್ದರು. ಇಂದು ಮತ್ತೆ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಪೊಲೀಸರು 32ನೇ ಎಸಿಎಂಎಂ ಕೋರ್ಟ್ ಗೆ ಮನವಿ ಮಾಡುತ್ತಾರೆ.
ಆರೋಪಿ ಸೌಮ್ಯ ಮೈಸೂರು ವಿವಿ ಭುಗೋಳಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿವಿಯಲ್ಲಿ ಎಂಎಸ್ ಸಿ ಓದಿರುವ ಸೌಮ್ಯ, ಪ್ರೊಫೆಸರ್ ಹೆಚ್. ನಾಗರಾಜ್ ಎಂಬುವರ ಬಳಿ ಪಿಹೆಚ್ ಡಿ ಮುಗಿಸಿದ್ದಾರೆ. ಜಿಐಎಸ್ ಅಂಡ್ ಅಗ್ರಕಲ್ಚರ್ ಜಿಯಾಗ್ರಫಿಯಲ್ಲಿ ಪಿಹೆಚ್ ಡಿ ಮಾಡಿದ್ದಾರೆ. ಸದ್ಯ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿದ್ದಾರೆ.