› ಉಪವಾಸ ಮಾಡಿ
› ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ ರೂಪದಲ್ಲಿರುವ ಶಿವನ ಪೂಜೆಯೇ. ಆದುದರಿಂದ ಆ ದಿನ ವಾತಾವರಣದಲ್ಲಿರುವ ಶಿವ-ಲಹರಿಗಳು ಆಕರ್ಶಿತಗೊಂಡು ಆ ಜೀವಕ್ಕೆ ಇತರ 364 ದಿನಗಳ ಕಾಲ ಉಪಯುಕ್ತವಾಗುತ್ತವೆ. ಸ್ತ್ರೀಯರು ನಾಗ ದೇವರಿಗೆ ಪೂಜೆ ಸಲ್ಲಿಸುವುದರಿಂದ ಅವರಿಗೆ ಶಕ್ತಿ ತತ್ತ್ವ ಪ್ರಾಪ್ತವಾಗುತ್ತದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
› ಸ್ತ್ರೀಯರು ನಾಗ ಪ್ರತಿಮೆಯನ್ನು ಸಹೋದರನೆಂದು ಪೂಜಿಸಿ
ಸ್ತ್ರೀಯರು ನಾಗ ದೇವರಿಗೆ ಪೂಜೆ ಸಲ್ಲಿಸುವುದರಿಂದ ಅವರ ಸಹೋದರನ ಆಯುಷ್ಯ ವೃದ್ಧಿಯಾಗುತ್ತದೆ.
› ಹೊಸ ಬಟ್ಟೆ ಮತ್ತು ಅಲಂಕಾರ ಧರಿಸಿ : ಇದರಿಂದ ಆನಂದ ಮತ್ತು ಚೈತನ್ಯದ ಲಹರಿಗಳು ಆಕರ್ಷಿಸಲ್ಪಡುತ್ತವೆ.
› ಸ್ತ್ರೀಯರು ಉಯ್ಯಾಲೆಯಲ್ಲಿ ಆಡಬೇಕು : ಇದರಿಂದ ಕ್ಷಾತ್ರಭಾವ ಮತ್ತು ಭಕ್ತಿಭಾವ ಹೆಚ್ಚಾಗಿ ಅದರಿಂದ ಸಾತ್ತ್ವಿಕತೆಯ ಲಹರಿಗಳು ಲಭಿಸುತ್ತವೆ.
› ಪ್ರಾರ್ಥನೆ ಮಾಡಿ
ಈ ದಿನದಂದು ಶೇಷನಾಗ ಮತ್ತು ಶ್ರೀವಿಷ್ಣುವಿಗೆ ಮುಂದಿನಂತೆ ಪ್ರಾರ್ಥನೆ ಮಾಡಬೇಕು – ‘ತಮ್ಮ ಕೃಪೆಯಿಂದ ಈ ದಿನದಂದು ಶಿವ ಲೋಕದಿಂದ ಪ್ರಕ್ಷೇಪಿತವಾಗುವ ಲಹರಿಗಳು ನನ್ನಿಂದ ಹೆಚ್ಚೆಚ್ಚು ಗ್ರಹಿಸುವಂತಾಗಲಿ. ನನ್ನ ಆಧ್ಯಾತ್ಮಿಕ ಪ್ರಗತಿಗೆ ಎದುರಾಗುವ ಎಲ್ಲ ಅಡಚಣೆಗಳೂ ನಾಶವಾಗಲಿ. ದೇವತೆಗಳ ಶಕ್ತಿಯು ನನ್ನ ಪಂಚಪ್ರಾಣಗಳಲ್ಲಿ ಸಂಗ್ರಹವಾಗಿ ಅದು ಈಶ್ವರ ಪ್ರಾಪ್ತಿಗಾಗಿ ಮತ್ತು ರಾಷ್ಟ್ರ ರಕ್ಷಣೆಗಾಗಿ ಉಪಯೋಗವಾಗಲಿ. ನನ್ನ ಪಂಚಪ್ರಾಣಗಳ ಶುದ್ಧಿಯಾಗಲಿ.’
ನಾಗರ ಪಂಚಮಿಯಂದು ಸಹೋದರಿಯ ಮೊರೆಯು ಈಶ್ವರನು ಆಲಿಸುತ್ತಾನೆ. ಆದುದರಿಂದ ಸಹೋದರಿಯು ತನ್ನ ಸಹೋದರನ ಉನ್ನತಿಗಾಗಿ ದೇವರಲ್ಲಿ ಕಳಕಳಿಯಿಂದ ಮುಂದಿನಂತೆ ಪ್ರಾರ್ಥಿಸಬೇಕು – ‘ದೇವರೇ, ನನ್ನ ಸಹೋದರನಿಗೆ ಸದ್ಬುದ್ಧಿ, ಶಕ್ತಿ ಮತ್ತು ಸಾಮರ್ಥ್ಯವನ್ನು ದಯಪಾಲಿಸಿ’.
ನಾಗರಪಂಚಮಿಯಂದು ಇವನ್ನು ಮಾಡದಿರಿ
- ಭೂಮಿ ಅಗೆಯುವುದು
- ಉಳುಮೆ ಮಾಡುವುದು
- ಕತ್ತರಿಸುವ ಕೆಲಸಗಳು
- ಕರಿಯುವುದು
- ಹೊಲಿಗೆ ಮಾಡುವುದು
ನಾಗರಪಂಚಮಿಯ ದಿನ ಏನನ್ನೂ ಹೆಚ್ಚಬಾರದು, ಕೊಯ್ಯಬಾರದು, ಕರಿಯಬಾರದು ಮುಂತಾದ ನಿಯಮಗಳನ್ನು ಪಾಲಿಸಬೇಕು. ಈ ದಿನ ಭೂಮಿಯನ್ನು ಅಗೆಯುವುದು ಕೂಡ ನಿಷೇಧಿಸಲಾಗಿದೆ. ಆದರೆ ವರ್ಷವಿಡೀ ಈ ಕೃತಿಗಳನ್ನು ಮಾಡುವುದರ ಮೇಲೆ ಯಾವುದೇ ನಿರ್ಬಂಧವಿಲ್ಲ. ಹಾಗಾದರೆ ನಾಗರಪಂಚಮಿಯಂದು ಈ ಕೃತಿಗಳನ್ನು ನಿಷೇಧಿಸಿರುವ ಕಾರಣ ಮತ್ತು ಅವುಗಳನ್ನು ಮಾಡುವುದರಿಂದಾಗುವ ಹಾನಿಯ ಬಗ್ಗೆ ತಿಳಿದುಕೊಳ್ಳೋಣ.
ನಾಗದೇವತೆಯು ಇಚ್ಛೆಯ ಪ್ರತೀಕ. ಇಚ್ಛೆಯ ಪ್ರವರ್ತಕ (ಅಂದರೆ ಇಚ್ಛೆಗೆ ವೇಗ ನೀಡುವ) ಮತ್ತು ಸಕಾಮ ಇಚ್ಛೆಯನ್ನು ಪೂರ್ಣಗೊಳಿಸುವ ದೇವತೆಯೂ ಹೌದು. ನಾಗದೇವರು ಇಚ್ಛೆಗೆ ಸಂಬಂಧಿಸಿದ ಕನಿಷ್ಠ ದೇವತೆಯಾಗಿದ್ದಾರೆ. ನಾಗರಪಂಚಮಿಯಂದು ಸಂಬಂಧಸಿದ ತತ್ತ್ವದ ದೇವತೆಗಳಿಂದ ನಿರ್ಮಾಣವಾಗುವ ಇಚ್ಛಾ ಲಹರಿಗಳು ಭೂಮಿಯ ಮೇಲೆ ಅವತರಿಸುವುದರಿಂದ ವಾಯುಮಂಡಲದಲ್ಲಿ ನಾಗದೇವತೆಯ ತತ್ತ್ವದ ಪ್ರಮಾಣವು ಹೆಚ್ಚಿರುತ್ತದೆ. ಈ ದಿನದಂದು ಭೂಮಿಯಲ್ಲಿರುವ ಇಚ್ಛಾಜನ್ಯ ದೇವತಾಸ್ವರೂಪ ಲಹರಿಗಳು ಘನವಾಗುವ ಪ್ರಮಾಣವೂ ಹೆಚ್ಚಿರುತ್ತದೆ. ಹೆಚ್ಚುವುದು, ಕೊಯ್ಯುವುದು, ಭೂಮಿ ಉಳುವುದು ಮುಂತಾದ ಕೃತಿಗಳಿಂದ ರಜ-ತಮಕ್ಕೆ ಸಂಬಂಧಿಸಿದ ಇಚ್ಛಾಲಹರಿಗಳು (ಅಂದರೆ ದೇವತಾಜನ್ಯ ಇಚ್ಛಾಲಹರಿಗಳ ಕಾರ್ಯವನ್ನು ವಿರೋಧಿಸುವ ಲಹರಿಗಳು) ವಾಯುಮಂಡಲದಲ್ಲಿ ಹೊರಸೂಸುವ ಪ್ರಮಾಣವು ಹೆಚ್ಚಾಗುವುದರಿಂದ ಈ ದಿನದಂದು ನಾಗದೇವತೆಯ ಲಹರಿಗಳಿಗೆ ತಮ್ಮ ಕಾರ್ಯ ಮಾಡುವಲ್ಲಿ ಅಡಚಣೆಗಳು ಬರಬಹುದು. ಈ ಕಾರಣದಿಂದ ನಾಗರಪಂಚಮಿಯಂದು ಹೆಚ್ಚುವುದು, ಕರಿಯುವುದು, ಉಳುಮೆ, ಹೊಲಿಗೆ ಮುಂತಾದ ಕೃತಿಗಳನ್ನು ಮಾಡುವುದರಿಂದ ಪಾಪ ತಗಲಬಹುದು.
ನಾಗರಪಂಚಮಿಯ ತುಲನೆಯಲ್ಲಿ ಇತರ ದಿನಗಳಂದು ಇಂತಹ ದೇವತಾಜನ್ಯ ಇಚ್ಛಾಲಹರಿಗಳು ಭೂಮಿಯತ್ತ ಬಾರದಿರುವುದರಿಂದ ಇಂತಹ ಕೃತಿಗಳನ್ನು ಮಾಡುವುದರಿಂದ ಸಮಷ್ಟಿ ಪಾಪ ತಗಲುವ ಪ್ರಮಾಣವೂ ಕಡಿಮೆಯಿರುತ್ತದೆ. ಈ ಕಾರಣದಿಂದಲೇ ಆಯಾ ದಿನದಂದು ಕಾರ್ಯನಿರತವಾಗಿರುವ ದೇವತೆಗಳ ತತ್ತ್ವಕ್ಕನುಗುಣವಾಗಿ ಆಯಾ ದಿನದಂದು ಆ ದೇವತೆಯ ಉತ್ಸವ ಅಥವಾ ಹಬ್ಬವನ್ನು ಆಚರಿಸಲು ಹಿಂದೂ ಧರ್ಮವು ಕಲಿಸುತ್ತದೆ.
ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿಷ್ಯಶಾಸ್ತ್ರತಜ್ಞರು 8548998564








