ಹುಬ್ಬಳ್ಳಿ ವಿಧಾನ ಪರಿಷತ್ ಎಲೆಕ್ಷನ್ –MLA, MLC ನಡುವೆ ಗಲಾಟೆ
ವಿಧಾನ ಪರಿಷತ್ ಚುನಾವಣೆ ವಿಚಾರವಾಗಿ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಬಿಜೆಪಿ ಶಾಸಕರ ಮಧ್ಯೆ ಗಲಾಟೆ ನಡೆದಿದೆ. ರಾಣೆಬೆನ್ನೂರು ಬಿಜೆಪಿ ಶಾಸಕ ಅರುಣ್ ಕುಮಾರ್ ಮತ್ತು ಪರಿಷತ್ನ ಬಿಜೆಪಿ ಸದಸ್ಯ ಆರ್ ಶಂಕರ್ ಮಧ್ಯೆ ಈ ಗಲಾಟೆ ನಡೆದಿದೆ.ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮ್ಮುಖದಲ್ಲೇ ಶಾಸಕರ ಬೆಂಬಲಿಗರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೂ ಹೋಗಿದೆ,
ಹುಬ್ಬಳ್ಳಿಯ ಖಾಸಗಿ ಹೋಟೇಲ್ ನಲ್ಲಿ ವಿಧಾನಪರಿಷತ್ ಚುನಾವಣಾ ಉಸ್ತುವಾರಿ ಹಂಚಿಕೆ ಸಂಬಂಧ ಸಭೆ ಏರ್ಪಡಿಸಲಾಗಿತ್ತು. ಈ ಸಮಯದಲ್ಲಿ ವಿಧಾನಪರಿಷತ್ ಬಿಜೆಪಿ ಸದಸ್ಯ ಆರ್ ಶಂಕರ್ ವಿರುದ್ದ ಶಾಸಕ ಅರುಣ್ ಕುಮಾರ್ ಗರಂ ಆಗಿದ್ದಾರೆ. ಗಲಾಟೆಯಾಗುತ್ತಿದ್ದಂತೆ ಆರ್ ಶಂಕರ್ ಸಭೆಯಿಂದ ಹೊರನಡೆದಿದ್ದಾರೆ. ಬಳಿಕ ಬಿಜೆಪಿ ಮುಖಂಡರು ಆರ್. ಶಂಕರ್ ಅವರನ್ನು ವಾಪಸ್ ಸಭೆಗೆ ಕರೆದುಕೊಂಡು ಬಂದಿರುವ ಘಟನೆ ನಡೆದಿದೆ.