ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ರಂಗೇರುತ್ತಿದೆ. ಇದರ ಮಧ್ಯೆಯೇ ಐಟಿ ದಾಳಿ ನಡೆದಿದ್ದು ಕೋಟಿ ಕೋಟಿ ಹಣ ಪತ್ತೆಯಾಗಿದೆ. ಸದ್ಯ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ವಾಕ್ಸಮರ ಉಂಟಾಗಿದ್ದು, ಆರೋಪ- ಪ್ರತ್ಯಾರೋಪ ಭರ್ಜರಿಯಾಗಿ ಮುಂದುವರೆದಿದೆ.
ಸದ್ಯ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ತಿರುಗೇಟು ನೀಡಿದೆ. ಎಕ್ಸ್ ಖಾತೆಯಲ್ಲಿ ಸರಣಿ ಪೋಸ್ಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಎಟಿಎಂ ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್ ಎಂಬ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಪೋಸ್ಟರ್ ನ್ನು ಬಿಜೆಪಿ ಸಂಸದ ಡಿ.ವಿ.ಸದಾನಂದಗೌಡ, ಶಾಸಕ ರವಿಸುಬ್ರಹ್ಮಣ್ಯ, ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ಬಿಡುಗಡೆ ಮಾಡಿದ್ದಾರೆ.
ಕಲೆಕ್ಷನ್ ಏಜೆಂಟ್ಗಳಾದ ಸುರ್ಜೇವಾಲ, ವೇಣುಗೋಪಾಲ್ ಬಂದಿದ್ದರು. ನಿಗಮ ಮಂಡಳಿ ನೇಮಕಕ್ಕೆ ರೇಟ್ ಕಾರ್ಡ್ ಫಿಕ್ಸ್ ಮಾಡಿದ್ದಾರೆ. ಬಿಡಿಎಗೆ 50 ಕೋಟಿ ರೂಪಾಯಿ, BWSSBಗೆ 45 ಕೋಟಿ ರೂಪಾಯಿ, ಕೆಆರ್ಐಡಿಎಲ್ಗೆ 20 ಕೋಟಿ ರೂಪಾಯಿ, ಕಿಯೋನಿಕ್ಸ್15 ಕೋಟಿ, ಕರ್ನಾಟಕ ಉಗ್ರಾಣ ನಿಗಮ 12 ಕೋಟಿ, ಬಿಎಂಟಿಸಿಗೆ 10 ಕೋಟಿ ರೂ. ಎಂದು ಟ್ವೀಟ್ ಮಾಡಿ, ಬಿಜೆಪಿ ವಾಗ್ದಾಳಿ ನಡೆಸಿದೆ.
ಇತ್ತ ಬಿಜೆಪಿ ಟ್ವೀಟ್ಗೆ ಕಾಂಗ್ರೆಸ್ ತೀವ್ರ ತಿರುಗೇಟು ನೀಡಿದೆ. ಶೂನ್ಯ ನಾಯಕತ್ವದಿಂದಾಗಿ ಬಿಜೆಪಿಗೆ ದೃಷ್ಟಿ ದೋಷ ಬಂದಿದೆ. ಅಧಿಕಾರ ಕಳೆದುಕೊಂಡ ಹತಾಶೆಯಿಂದ ಹೊರಬರಲಿ. ದೃಷ್ಟಿ ದೋಷ ಸರಿಹೋಗಲಿ ಎಂದು ಹಾರೈಸುತ್ತೇವೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿರುಗೇಟಿ ನೀಡಿದೆ.