ಹಾಸನ: ಕಾಡಾನೆಗಳ (Elephant) ಉಪಟಳ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಎಚ್ಚರಿಕೆ ನೀಡಲು ಹೋದ ವೇಳೆ ಅವರ ಮೇಲೆಯೇ ಹಲ್ಲೆ ನಡೆದಿರುವ ಘಟನೆ ನಡೆದಿದೆ.
ಅರಣ್ಯ ಪ್ರದೇಶಕ್ಕೆ ಹೋಗಬೇಡಿ ಎಂದು ತಡೆದ ಅರಣ್ಯ ಇಲಾಖೆ (Forest Department) ಸಿಬ್ಬಂದಿ ಮೇಲೆಯೇ ಗ್ರಾಮಸ್ಥರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು-ಕೆಸಗೋಡು ಗ್ರಾಮಗಳ ರಸ್ತೆಯಲ್ಲಿ ನಡೆದಿದೆ. ಆರ್ಆರ್ಟಿ ಹಾಗೂ ಈಟಿಎಫ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಆನೆಗಳ ಬಗ್ಗೆ ಎಚ್ಚರಿಕೆ ನೀಡುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದುರ್ವರ್ತನೆ ತೋರಿ, ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.