ಮಮತಾ ಬ್ಯಾನರ್ಜಿ ಮೇಲೆ ದಾಳಿ : ಆಸ್ಪತ್ರೆಗೆ ದಾಖಲು
ಕೋಲ್ಕತ್ತಾ : ಪ್ರಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ದಾಳಿ ನಡೆದಿದ್ದು, ಅವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಾಳಿಯಲ್ಲಿ ಅವರ ಕಾಲಿಗೆ ಪೆಟ್ಟಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕೆಲ ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ಆಗ ಅವರ ಕಾಲಿಗೆ ಗಾಯವಾಗಿದೆ ಎಂದು ವರದಿಗಳು ತಿಳಿಸಿವೆ.
ಅವರ ಎಡಪಾದದ ಎಲುಬಿನಲ್ಲಿ ಸಣ್ಣ ಪ್ರಮಾಣದ ನೋವು ಕಾಣಿಸಿಕೊಂಡಿದ್ದು, ಪ್ಲಾಸ್ಟರ್ ಹಾಕಲಾಗಿದೆ. ಅದೇ ರೀತಿ ಬಲ ಭುಜ, ಕುತ್ತಿಗೆಯ ಭಾಗ, ಮತ್ತು ಎದೆನೋವು ಕಾಣಿಸಿಕೊಂಡಿರುವ ಕಾರಣ ಮುಂದಿನ 48 ಗಂಟೆಗಳ ಕಾಲ ತೀವ್ರ ನಿಗಾ ವಹಿಸಲಾಗುವುದು ಎಂದು ಐಪಿಜಿಎಂಇಆರ್ ಮತ್ತು ಎಸ್ ಎಸ್ ಕೆಎಂನ ವೈದ್ಯರಾದ ಡಾ.ಎಂ.ಬಂದೋಪಾಧ್ಯಾಯ ಮಾಹಿತಿ ನೀಡಿದ್ದಾರೆ.
ಮಮತಾ ಬ್ಯಾನರ್ಜಿ ಅವರ ಮುಂದಿನ ಆರೋಗ್ಯ ಸ್ಥಿತಿಯನ್ನು ಗಮನಿಸಿ ಆಸ್ಪತ್ರೆಯ ವಿಶೇಷ ವಾರ್ಡ್ ಗೆ ಎಂಆರ್ ಐ ಪರೀಕ್ಷೆಯ ನಂತರ ಶಿಪ್ಟ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.