ಮೈಸೂರು : ದಸರಾ (Mysuru Dasara) ಸಂಭ್ರಮದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆದಿರುವ ಘಟನೆ ನಡೆದಿದೆ.
ಪ್ರವಾಸಿಗರಿಗೆ ಬೇಗ ಹೋಗಿ ಎಂದು ಹೇಳಿದಕ್ಕೆ ಪೊಲೀಸರ (Mysuru Police) ಮೇಲೆಯೇ ಹಲ್ಲೆ ನಡೆಸಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ವೈ.ರಾಜು, ಅರುಣ್ ಕೌಶಿಕ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಐವರ ಮೇಲೆ ಎಫ್ ಐಆರ್ ದಾಖಲಾಗಿದೆ.
ಮೈಸೂರಿನ ಹಾರ್ಡಿಂಗ್ ಸರ್ಕಲ್ ವೃತ್ತದಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಬೇಗ ಹೋಗಿ ಎಂದು ಹೇಳುತ್ತಿದ್ದರು. ಈ ವೇಳೆ ಬೇಗ ಹೋಗಿ ಎಂದಿದ್ದಕ್ಕೆ ಐವರು ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಉಮೇಶ್, ಹರೀಶ್, ಧ್ರುವ, ಲತಾ, ಗಾನವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.