ಮುಂಬೈ : ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರು ವಾಸಿಸುತ್ತಿದ್ದ ಮನೆ `ರಾಜಗೃಹ’ದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಕುರಿತಂತೆ ಡಾ. ಅಂಬೇಡ್ಕರ್ ಅವರ ಮೊಮ್ಮಗ ಸುಜತ್ ಮಾಹಿತಿ ನೀಡಿದ್ದಾರೆ.
ಅಂಬೇಡ್ಕರ್ ಕುಟುಂಬಸ್ಥರು ಮನೆಯಲ್ಲಿದ್ದ ಸಂದರ್ಭ ಕೆಲ ವ್ಯಕ್ತಿಗಳು ಎರಡು ಕೊಠಡಿಗಳತ್ತ ಕಲ್ಲು ತೂರಿದ್ದಾರೆ. ಒಂದು ಕೊಠಡಿ ಮ್ಯೂಸಿಯಂ ಹಾಗೂ ಫೋಟೋ ಗ್ಯಾಲರಿ ಹಾಗೂ ಬಾಬಾಸಾಹೇಬ್ ಅವರ ಪುಸ್ತಕಗಳ ಕೊಠಡಿಯಾಗಿದ್ದರೆ ಇನ್ನೊಂದು ಅವರ ಕಚೇರಿ/ಸಭಾ ಕೊಠಡಿಯಾಗಿದೆ ಎಂದು ಸುಜತ್ ತಿಳಿಸಿದ್ದಾರೆ.
ಈ ಘಟನೆಯನ್ನು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಖಂಡಿಸಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ಸುದ್ದಿ ಹರಡುತ್ತಿದ್ದಂತೆಯೇ ಸ್ಥಳಕ್ಕೆ ದಲಿತ ಸಂಘಟನೆಯ ಸದಸ್ಯರು ಆಗಮಿಸಿ ಪ್ರತಿಭಟನೆ ನಡೆಸಿರುವುದಾಗಿ ವರದಿಯಾಗಿದೆ.
ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!
ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ದೇಶದ ಜನತೆಗೆ ಕೆಲವು ಮಹತ್ವದ ಮನವಿಗಳನ್ನು ಮಾಡಿದ್ದಾರೆ. ಚಿನ್ನ ಖರೀದಿಸಬೇಡಿ, ವಾಹನ ಬಳಕೆ ತಗ್ಗಿಸಿ, ವಿದೇಶಿ ಪ್ರವಾಸ ಬೇಡ ಎಂಬಂತಹ ಸಲಹೆಗಳ...








