ಬೆಂಗಳೂರು: ರಾಜಧಾನಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಇನ್ನೂ ನಿಲ್ಲುತ್ತಿಲ್ಲ. ಪೊಲೀಸರ ಖಡಕ್ ಎಚ್ಚರಿಕೆ ಮಧ್ಯೆಯೂ ಕಿಡಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ.
ದುಷ್ಕರ್ಮಿಗಳು ನಡುರಾತ್ರಿ ಆಟೋ ಅಡ್ಡಗಟ್ಟಿ ಚಾಲಕ ಹಾಗೂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೊರಮಾವಿನಲ್ಲಿ ನಡೆದಿದೆ. ಸದ್ಯ ಪೊಲೀಸರು ಈ ಕುರಿತು ದೂರು ದಾಖಲಿಸಿಕೊಂಡಿದ್ದಾರೆ.
ಆಟೋ ಚಾಲಕ ನಂಜುಂಡ ಎಂಬುವವರು ನಾಲ್ವರು ಪ್ರಯಾಣಿಕರನ್ನು ಊಬರ್ ಆಟೋದಲ್ಲಿ ಹತ್ತಿಸಿಕೊಂಡಿದ್ದು, ಹೊರಮಾವು ಬಳಿ ನಿಲ್ಲಿಸಿದ್ದರು. ಈ ಸಂದರ್ಭದಲ್ಲಿ ಕಾರಿನಲ್ಲಿ ಬಂದ ಗ್ಯಾಂಗ್ ಡ್ರೈವರ್ಗೆ ಹಿಗ್ಗಾಮುಗ್ಗಾ ಥಳಿಸಿದೆ. ಆರೋಪಿಗಳ ಕಾಲಿಗೆ ಬಿದ್ದು ಯುವತಿ ಬೇಡಿಕೊಂಡರೂ ಹಲ್ಲೆ ನಡೆಸಿದ್ದಾರೆ. ಪೊಲೀಸರಿಗೆ ಕರೆ ಮಾಡಲು ಯತ್ನಿಸಿದಾಗ ಮೊಬೈಲ್ ಕಸಿದುಕೊಂಡಿದ್ದಾರೆ ಎನ್ನಲಾಗಿದೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.