ಬಳ್ಳಾರಿ: ಆಟೋವೊಂದು ಪಲ್ಟಿಯಾದ ಪರಿಣಾಮ ಸುಮಾರು 30ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದಲ್ಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಟೋ ಪಲ್ಟಿಯಾಗಿದೆ. ಇವರನ್ನೆಲ್ಲ ತೆಕ್ಕಲಕೋಟೆ ಪಟ್ಟಣದಿಂದ ಕರೆದುಕೊಂಡು ಹೋಗಲಾಗುತ್ತಿತ್ತು. ಆಟೋದಲ್ಲಿ 40 ಜನರಿದ್ದರು. ಸಿರಿಗೇರಿಯಿಂದ ತೆಕ್ಕಲಕೋಟೆಗೆ ಬರುವ ಮಾರ್ಗದ ಸುಂಕ್ಲಮ್ಮ ದೇವಸ್ಥಾನದ ಬಳಿಯ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಪಟ್ಟಣದ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಂತರ ಗಂಭೀರವಾಗಿ ಗಾಯಗೊಂಡವರನ್ನು 25ಕ್ಕೂ ಅಧಿಕ ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ಟ್ರಮಾ ಕೇರ್ ಸೇಂಟರ್ ಗೆ ಕಳುಹಿಸಿಕೊಡಲಾಗಿದೆ ಎನ್ನಲಾಗಿದೆ.