ಅಯೋಧ್ಯೆ: ರಾಮನವಮಿಯ ಹಿನ್ನೆಲೆಯಲ್ಲಿ ರಾಮಮಂದಿರ ಶೃಂಗಾರಗೊಂಡಿದೆ. ರಾಮ ಮಂದಿರ ಉದ್ಘಾಟನೆಯಾದ ಮೊದ ಬಾರಿಗೆ ರಾಮನವಮಿ ಆಚರಿಸಲಾಗುತ್ತಿದೆ. ಹೀಗಾಗಿ ಸಂಭ್ರಮ ಮನೆ ಮಾಡಿದೆ.
ರಾಮನವಮಿಯಂದು ಅಯೋಧ್ಯೆಯ ರಾಮ ಮಂದಿರಕ್ಕೆ 1,11,111 ಕೆಜಿ ಲಡ್ಡುಗಳನ್ನು ಏಪ್ರಿಲ್ 17 ರಂದು ನೈವೇದ್ಯ ಮತ್ತು ವಿತರಣೆಗಾಗಿ ಕಳುಹಿಸಲಾಗುವುದು ಎಂದು ದೇವ್ರಹ ಹನ್ಸ್ ಬಾಬಾ ಟ್ರಸ್ಟ್ ನ ಟ್ರಸ್ಟಿ ಅತುಲ್ ಕುಮಾರ್ ಸಕ್ಸೇನಾ ಹೇಳಿದ್ದಾರೆ.
ಕಾಶಿ ವಿಶ್ವನಾಥ ದೇಗುಲ ಅಥವಾ ತಿರುಪತಿ ಬಾಲಾಜಿ ದೇವಸ್ಥಾನಗಳಿಗೆ ಪ್ರತಿ ವಾರ ಲಡ್ಡು ಪ್ರಸಾದ ಕಳುಹಿಸಲಾಗುತ್ತದೆ ಎಂದು ಹೇಳಿದ್ದಾರೆ. ಜ. 22 ರಂದು ಅಯೋಧ್ಯೆಯಲ್ಲಿ ನಡೆದಿದ್ದ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನ ದೇವ್ರಹ ಹಂಸ ಬಾಬಾ ಆಶ್ರಮದಿಂದ ನೈವೇದ್ಯಕ್ಕಾಗಿ 40 ಸಾವಿರ ಕೆಜಿ ಲಡ್ಡು ಕೊಡುಗೆಯಾಗಿ ಬಂದಿದ್ದವು.