ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಹಿರೇಮದ್ದು ಅಶ್ವಗಂಧ ಎನ್ನುವ ಉತ್ಕೃಷ್ಟ ದಿವ್ಯೌಷಧಿಯ ಕುರಿತು ನಿಮಗೆಷ್ಟು ಗೊತ್ತು?

admin by admin
August 14, 2020
in Health, Newsbeat, ಆರೋಗ್ಯ
Share on FacebookShare on TwitterShare on WhatsappShare on Telegram

ಹಿರೇಮದ್ದು ಅಶ್ವಗಂಧ ಎನ್ನುವ ಉತ್ಕೃಷ್ಟ ದಿವ್ಯೌಷಧಿಯ ಕುರಿತು ನಿಮಗೆಷ್ಟು ಗೊತ್ತು?

ಒಂದು ಚಹಾದ ಜಾಹೀರಾತಿನಲ್ಲಿ ಅಶ್ವಗಂಧದ ಪ್ರಸ್ತಾಪ ಬರುವುದನ್ನು ಗಮನಿಸಿರಬಹುದು. ನಮ್ಮ ಹಿರಿಯರಿಂದ ಹಿರೇಮದ್ದು ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ, ವಾತ ಸಂಬಂಧಿ ದೋಷಗಳನ್ನು ನಿವಾರಿಸುತ್ತದೆ. ಈ ಗಿಡದ ಬೇರಿಗೆ ಲೈಂಗಿಕ ದೌರ್ಬಲ್ಯ ನಿವಾರಿಸಬಲ್ಲ ಶಕ್ತಿ ಇದೆ. ಹಾವು ಚೇಳು ಕಚ್ಚಿದಾಗ ಇದರ ಬೇರನ್ನು ನಿಂಬೇರಸದೊಂದಿಗೆ ಹಚ್ಚಿದರೆ ಬೇಗ ವಿಷವಿಳಿಯುತ್ತದೆ. ಆಯುರ್ವೇದ ಪಂಡಿತರು ಸಂಸ್ಕೃತದಲ್ಲಿ ಇದಕ್ಕೆ ವಾಜೀಗಂಧಾ, ಹಯಗಂಧಾ, ವರಾಹಕರ್ಣೀ ಎಂಬೆಲ್ಲಾ ಹೆಸರುಗಳಿವೆ. ಇದರ ಬೇರಿನಿಂದ ಕುದುರೆ ಮೂತ್ರದ ವಾಸನೆ ಹೊರಡುತ್ತದೆ ಹಾಗೂ ಬೇರನ್ನು ಸ್ವಚ್ಛಗೊಳಿಸಿ ಪುಡಿಮಾಡಿ ಸೇವಿಸಿದರೆ ಕುದುರೆಯ ಶಕ್ತಿ, ಬಲ, ಉತ್ಸಾಹ ಬರುತ್ತದೆಯಾದ್ದರಿಂದ ಇದಕ್ಕೆ ಅಶ್ವಗಂಧಾ ಎಂದು ಕರೆಯುತ್ತಾರೆ. ಇದಕ್ಕೆ ಇಂಗ್ಲೀಷ್‍ನಲ್ಲಿ ವಿಂಟರ್ ಚೆರ್ರಿ ಎನ್ನುತ್ತಾರೆ. ಗುಜರಾತ್. ರಾಜಸ್ಥಾನ, ಮಧ್ಯಪ್ರದೇಶ, ಉತ್ತರಪ್ರದೇಶ, ಪಂಜಾಬ್, ಮಹಾರಾಷ್ಟ್ರ, ವಾಯುವ್ಯ ಭಾರತ, ಕರ್ನಾಟಕ ಮುಂತಾದೆಡೆಯಲ್ಲಿ ಈ ಗಿಡವನ್ನು ಕಾಣಬಹುದು. ಸೋಲನೇಸಿ ಕುಟುಂಬಕ್ಕೆ ಸೇರಿದ ಅಶ್ವಗಂಧದ ವೈಜ್ಞಾನಿಕ ಹೆಸರು ವಿತಾಸಿಯಾ ಸಾಮ್ನಿಫೆರ.

Related posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026
ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026

ಸುಮಾರು 1 ಮೀಟರ್ ಎತ್ತರಕ್ಕೆ ಬೆಳೆಯುವ ಈ ಮೂಲಿಕೆ ಆಫ್ರಿಕಾ, ಮೆಡಿಟೇರಿಯನ್ ಪ್ರದೇಶ ಹಾಗೂ ಭಾರತದಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತದೆ. ಆಯುರ್ವೇದ ಹಾಗೂ ಯುನಾನಿ ಔಷಧಿಗಳ ತಯಾರಿಕೆಯಲ್ಲಿ ಇದರ ಬೇರು, ತೊಗಟೆ, ಎಲೆ, ಹಣ್ಣು ಮತ್ತು ಬೀಜಗಳು ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ. ಇದರ ಎಲೆಗಳು ಆಡುಸೋಗೆಯ ಎಲೆಗಳನ್ನು ಹೋಲುವವು. ಆದರೆ ಅದಕ್ಕಿಂತ ಚಿಕ್ಕವು ಮತ್ತು ಉದ್ದವಿರುವುದಿಲ್ಲ. ಕಹಿರುಚಿ ಹೊಂದಿರುವ ಇದರ ಎಲೆಗಳು ಬೂದು ಬಣ್ಣದ ರೋಮಗಳಿಂದ ಕೂಡಿರುತ್ತವೆ. ಅಶ್ವಗಂಧವು ಹಿಂಗಾರಿನಲ್ಲಿ ಬೆಳೆಯಬಹುದಾದ ಬೆಳೆ. ಈ ಬೆಳೆಗೆ ಶುಷ್ಕ ವಾತಾವರಣವಿದ್ದರೂ ನಡೆಯುತ್ತದೆ. ರಾಗಿಯನ್ನು ಬಿತ್ತುವಂತೆ ಈ ಬೆಳೆಯ ಬೀಜವನ್ನು ಚೆಲ್ಲಿ ಬಿತ್ತನೆ ಮಾಡಬಹುದು.

ಅಶ್ವಗಂಧದ ಎಲೆ, ಹಣ್ಣು, ಬೇರು ಚಿಕಿತ್ಸೆಗೆ ಉಪಯುಕ್ತವಾಗಿವೆ. ಅಶ್ವಗಂಧದ ಬೇರಿನಲ್ಲಿರುವ ಸೋಮ್ನಿಫೆರಸ್ ಎಂಬ ಕ್ಷಾರವು ನಿದ್ದೆ ಬರಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು ರಕ್ತ ಶುದ್ಧಿ ಮಾಡಿ ದೇಹಕ್ಕೆ ಕಾಂತಿ ಮತ್ತು ಪುಷ್ಠಿಯನ್ನು ಕೊಡುತ್ತದೆ. ನಿಶ್ಯಕ್ತಿಯನ್ನು ನಿವಾರಿಸುವ ಶಕ್ತಿಯೂ ಇದಕ್ಕಿದೆ. ಇದರ ಸೇವನೆಯಿಂದ ಚಂಚಲತೆ ಮತ್ತು ಗಾಬರಿ ದೂರವಾಗುತ್ತದೆ. ಮಕ್ಕಳಿಗೆ ಹೆಚ್ಚಿನ ಪುಷ್ಠಿಯನ್ನು ಇದು ನೀಡುತ್ತದೆ. ವೃದ್ಧಾಪ್ಯದ ದೌರ್ಬಲ್ಯಗಳನ್ನು ನೀಗಿ ಶಕ್ತಿ ಮತ್ತು ಯೌವ್ವನವನ್ನು ಈ ಅಶ್ವಗಂಧ ನೀಡುತ್ತದೆ ಈ ವನೌಷಧವು ಎಲ್ಲಾ ರೀತಿಯ ಬಾವು ಮತ್ತು ನೋವುಗಳನ್ನು ನಿವಾರಿಸುತ್ತದೆ. ಕೀಲುಗಳಲ್ಲಿ ನೋವು ಮತ್ತು ಊತವಿದ್ದರೆ ಇದರ ಎಲೆಗಳಿಗೆ ಎಣ್ಣೆ ಸವರಿ ಬಿಸಿ ಮಾಡಿ ನೋವಿರುವ ಜಾಗದಲ್ಲಿ ಕಟ್ಟಿದರೆ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಅಶ್ವಗಂಧ ಚೂರ್ಣವನ್ನು ನೆಲ್ಲಿಕಾಯಿ ರಸದಲ್ಲಿ ಕಲಸಿ, ತುಪ್ಪ ಮತ್ತು ಜೇನುತುಪ್ಪವನ್ನು ಸಮ ಪ್ರಮಾಣದಲ್ಲಿ ಬೆರೆಸಿ ಸೇವಿಸಿದರೆ ದೃಷ್ಟಿದೋಷಗಳ ನಿವಾರಣೆಯಾಗುತ್ತದೆ. ಶುದ್ಧಿ ಮಾಡಿದ ಅಶ್ವಗಂಧ ಚೂರ್ಣ, ಲೋದ್ರಚಕ್ಕೆ ಚೂರ್ಣ ಮತ್ತು ನೆಲಗುಂಬಳದ ಗಡ್ಡೆ ಚೂರ್ಣ ಸಮ ಭಾಗ ಸೇರಿಸಿ ಸೇವಿಸಬೇಕು. ನಂತರ ಕಲ್ಲುಸಕ್ಕರೆ ಬೆರೆಸಿದ ಹಸುವಿನ ಹಾಲು ಒಂದು ಲೋಟ ಸೇವಿಸಬೇಕು. ಈ ರೀತಿ ದಿನಕ್ಕೆ ಬೆಳಗ್ಗೆ, ಸಾಯಂಕಾಲ ಎರಡು ಬಾರಿ ಸೇವಿಸುವುದರಿಂದ ಮುಟ್ಟಿನ ದೋಷಗಳ ನಿವಾರಣೆಯಾಗುತ್ತದೆ.

30ಗ್ರಾಂ ಅಮೃತಬಳ್ಳಿಯ ಸತ್ವಕ್ಕೆ 40 ಗ್ರಾಂ ಶುದ್ಧ ಮಾಡಿದ ಅಶ್ವಗಂಧದ ಚೂರ್ಣವನ್ನು ಸೇರಿಸಿಟ್ಟುಕೊಂಡು, ಒಂದು ಹೊತ್ತಿಗೆ ಎರಡೂವರೆ ಗ್ರಾಂನಷ್ಟು ದಿನಕ್ಕೆ ಎರಡು ಬಾರಿ ಜೇನುತುಪ್ಪದೊಂದಿಗೆ ಸೇವಿಸಿದರೆ ತುಂಬಾದಿನಗಳಿಂದ ಗುಣವಾಗದ ಜ್ವರವೂ ಗುಣವಾಗುವುದು. ಇದರ ಬೇರು ಮತ್ತು ಒಣಶುಂಠಿಯ ನಯವಾದ ಚೂರ್ಣ ಮತ್ತು ಕಲ್ಲುಸಕ್ಕರೆ ಸೇರಿಸಿ ಬೆಳಿಗ್ಗೆ ಸಂಜೆ ಸೇವಿಸಿದರೆ ವಾತದ ಸಮಸ್ಯೆ ದೂರಾಗುತ್ತದೆ. ಅಶ್ವಗಂಧದ ನಯವಾದ ಪುಡಿಗೆ ಕೆಂಪು ಕಲ್ಲುಸಕ್ಕರೆ ಪುಡಿಯನ್ನು ಒಂದು ಬಟ್ಟಲು ಬಿಸಿ ಹಾಲಿನಲ್ಲಿ ಸೇರಿಸಿ ಬೆಳಿಗ್ಗೆ ಮತ್ತು ಸಾಯಂಕಾಲ ಸೇವಿಸುವುದರಿದ ಬೆನ್ನುನೋವು ಮಾಯವಾಗುತ್ತದೆ. ಜೊತೆಗೆ ಪ್ರತಿದಿನ ಎರಡು-ಮೂರು ಬಾರಿ ಅಶ್ವಗಂಧದ ಎಲೆಗಳಿಗೆ ಎಳ್ಳೆಣ್ಣೆ ಸವರಿ ಸ್ವಲ್ಪ ಬಿಸಿ ಮಾಡಿ ನೋವಿರುವ ಜಾಗದಲ್ಲಿ ಕಟ್ಟುವುದರಿಂದ ಉತ್ತಮ ಫಲಿತಾಂಶ ಲಭಿಸುತ್ತದೆ.

ಮಾಹಿತಿ ಮತ್ತು ಲೇಖನ:- ಅಂಬಿಕಾ ಸೀತೂರು
*

Tags: #Ayurvedic scholars#medicin#saakshatv.comashwagandhaAyurvedicgujarathkarnatakaMadhya Pradesh
ShareTweetSendShare
Join us on:

Related Posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram