`ದುರ್ಯೋಧನ’ನ ಜೊತೆ ಸಿನಿಮಾ ಮಾಡ್ತಾರಂತೆ `ಕೌರವ’
ಬೆಂಗಳೂರು : ಒಳ್ಳೆಯ ಕಥೆ ಹಾಗೂ ದರ್ಶನ್ ಅವರ ಕಾಲ್ ಶೀಟ್ ಸಿಕ್ಕರೆ ಖಂಡಿತಾ ಸಿನಿಮಾ ಮಾಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ದರ್ಶನ್ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜರಾಜೇಶ್ವರಿ ನಗರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಮುನಿರತ್ನ ಪರ ದರ್ಶನ್ ಪ್ರಚಾರ ಮಾಡಿದ್ದರು.
ಆಗ ಅವರ ಜೊತೆ ನಾನು ಪ್ರಚಾರ ಮಾಡಿದ್ದೆ. ಹಾಗಾಗಿ ನಮ್ಮ ಮನೆಗೆ ಆಹ್ವಾನ ನೀಡಿದ್ದೆ, ಅವರು ಬಂದಿದ್ದರು. ಇದರಲ್ಲಿ ವಿಶೇಷ ಅರ್ಥ ಏನೂ ಇಲ್ಲ ಎಂದರು.
ದರ್ಶನ್ ಜೊತೆ ಸಿನಿಮಾ ಮಾಡೋ ಪ್ಲಾನ್ ಇದ್ಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಒಳ್ಳೆಯ ಕಥೆ ಸಿಕ್ಕರೆ ಮತ್ತು ದರ್ಶನ್ ಅವರ ಕಾಲ್ ಶೀಟ್ ಸಿಕ್ಕರೆ ಖಂಡಿತಾ ಸಿನಿಮಾ ಮಾಡುತ್ತೇನೆ ಎಂದು ನಗುತ್ತಲೇ ಹೇಳಿದರು.
`ಬಿಜೆಪಿಗರ ಶಕುನಿತಂತ್ರ’ ಹೇಳಿಕೆ `ಕಾಂಗ್ರೆಸ್ ಶಕ್ತಿ ಕುಂದಿಸಲ್ಲ’
ಇದೇ ವೇಳೆ ಸಂಪುಟ ಪುನಾರಚನೆ ಬಗ್ಗೆ ಮಾತನಾಡಿ, ನಮ್ಮ ಎಲ್ಲಾ ಶಾಸಕರು ಅರ್ಹರೆ. ಮಂತ್ರಿ ಮಾಡುವಂತೆ ಕೇಳುವುದು ತಪ್ಪಲ್ಲ. ಅಂತಿಮ ತೀರ್ಮಾನ ಸಿಎಂ ಹಾಗೂ ಹೈಕಮಾಂಡ್ ಮಾಡುತ್ತಾರೆ ಎಂದರು.
ಕೆಪಿಸಿಸಿ ಅಧ್ಯಕ್ಷರು ನನ್ನ ರಕ್ಷಣೆಗೆ ಬರುತ್ತಿಲ್ಲ ಎಂಬ ಅಖಂಡ ಶ್ರೀನಿವಾಸಮೂರ್ತಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಕ್ಷದ ಅಧ್ಯಕ್ಷರಾಗಿ ಶಾಸಕರ ರಕ್ಷಣೆಗೆ ಬರಬೇಕಿತ್ತು.
ಅಖಂಡ ಶ್ರೀನಿವಾಸಮೂರ್ತಿ ದಲಿತ ಸಮುದಾಯದ ಶಾಸಕರು. ಮುಸಲ್ಮಾನರ ಮತಗಳು ಆ ಕ್ಷೇತ್ರದಲ್ಲಿ ಹೆಚ್ಚಿವೆ.
ಅಖಂಡ ಶ್ರೀನಿವಾಸಮೂರ್ತಿ ಪಕ್ಷ ಬಿಟ್ಟು ಹೋಗಲಿ ಎಂಬ ಭಾವನೆ ಕಾಂಗ್ರೆಸ್ ಪಕ್ಷಕ್ಕೆ ಇರಬಹುದು. ಹೀಗಾಗಿ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ರಕ್ಷಣೆ ನೀಡುತ್ತಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel