ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಬಿ.ಸಿ. ಪಾಟೀಲ್ ರ ಅಳಿಯನ ಆತ್ಮಹತ್ಯೆಯ ಹಿಂದಿನ ಕಾರಣವೇನು?

ಮಕ್ಕಳಿಲ್ಲದ ಕೊರಗು ಸಾವಿಗೆ ಕಾರಣವಾಯಿತೇ?

Author2 by Author2
July 8, 2024
in Mumbai Karnataka, Kalyana karnataka, Karavali Karnataka, Malenadu Karnataka, ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕ, ಮುಂಬೈ ಕರ್ನಾಟಕ, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮಾಜಿ ಸಚಿವ ಬಿ.ಸಿ ಪಾಟೀಲ್ ಅವರ ಅಳಿಯ ಆತ್ಮಹತ್ಯೆಗೆ ಶರಣಾಗಿದ್ದು, ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಬಿ.ಸಿ. ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಪಾಟೀಲ್ ಅವರ ಪತಿ ಪ್ರತಾಪ್ ಕುಮಾರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಹತ್ತಿರದ ಕಾಡಿನ ಬಳಿ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Related posts

biscoff-swiggy-dineout-dm-a-lonely-cup-campaign-offers

August 11, 2026
ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

August 11, 2026

ಕೂಡಲೇ ಪ್ರತಾಪ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಅಳಿಯನ ಆತ್ಮಹತ್ಯೆ ಕುರಿತು ಬಿ.ಸಿ. ಪಾಟೀಲ್ ಪ್ರತಿಕ್ರಿಯಿಸಿದ್ದು, ಮಗಳ ಜೊತೆ 2008 ರಲ್ಲಿ ಮದುವೆ ಆಗಿತ್ತು. ಮಕ್ಕಳು ಆಗಿಲ್ಲ ಎಂಬ ನೋವಿನಲ್ಲಿ ಇದ್ದರು. ಡಿ ಅಡಿಕ್ಷನ್ ಸೆಂಟರ್‌ನಲ್ಲಿ ಎರಡು ತಿಂಗಳು ಇದ್ದರು. ಆಗ ಸರಿ ಹೋಗಿದ್ದರು ಎಂದು ಹೇಳಿದ್ದಾರೆ.

ಇವತ್ತು ಬೆಳಗ್ಗೆ ಊರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದ. ಆದರೆ, ಆನಂತರ ಸಾಯುತ್ತಿದ್ದೇನೆ ಎಂದು ಕುಟುಂಬಸ್ಥರಿಗೆ ಕಾಲ್ ಮಾಡಿ ಹೇಳಿದ್ದ. ಈ ವಿಚಾರವನ್ನು ಪ್ರತಾಪ್‌ ಅವರ ಅಣ್ಣ ಕಾಲ್ ಮಾಡಿ ಮಾಹಿತಿ ನೀಡಿದ್ದ. ಮದುವೆ ಆಗಿ 16 ವರ್ಷ ಆಗಿತ್ತು. ರಾಜಕೀಯ ಸೇರಿ ನಮ್ಮ ವ್ಯವಹಾರಗಳನ್ನೆಲ್ಲ ಪ್ರತಾಪ್ ನೋಡಿಕೊಳ್ಳುತ್ತಿದ್ದರು. ಬೆಳಿಗ್ಗೆ ನನ್ನ ಜೊತೆಯೇ ತಿಂಡಿ ಸೇವಿಸಿದ್ದಾರೆ. ನಾನು ನಮ್ಮ ಭಾಗದ ಕೆರೆಗಳಿಗೆ ಹೋಗಿ ಭೇಟಿ ನೀಡಿ ಬರುವಾಗ ವಿಷಯ ಗೊತ್ತಾಯ್ತು. ಈ ವಿಷಯ ಕೇಳಿ ತುಂಬಾ ನೋವಾಗಿದೆ. ಚನ್ನಗಿರಿಯ ಕತ್ತಲಗೆರೆ ಗ್ರಾಮದಲ್ಲಿ ಮಂಗಳವಾರ ಅಂತ್ಯ ಸಂಸ್ಕಾರ ಮಾಡುತ್ತೇವೆ ಎಂದು ಹೇಳಿದ್ದಾರೆ.

ಈ ಕುರಿತು ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್, ಆತ್ಮಹತ್ಯೆ ಮಾಡಿಕೊಂಡ ಪ್ರತಾಪ್ ಕುಮಾರ್, ವೈಯಕ್ತಿಕ ಕಾರಣಕ್ಕೆ ವಿಷ ಸೇವಿಸಿದ್ದಾರೆ. ಅವರು ಶಿವಮೊಗ್ಗ ಕಡೆಯಿಂದ ಕಾರಿನಲ್ಲಿ ಒಬ್ಬರೇ ಬಂದು ಕ್ರಿಮಿನಾಶಕ ಔಷಧಿ ‌ಕುಡಿದಿದ್ದಾರೆ. ಕುಡಿದು ಕಾರಿನಲ್ಲಿ ಅಸ್ವಸ್ಥರಾಗಿದ್ದರು. ಮೃತರ ಸಹೋದರ ಪ್ರಭು ಎಂಬುಬದರು ‌ಪೊಲೀಸರಿಗೆ ಮಾಹಿತಿ‌ ನೀಡಿದ್ದರು.‌ ನಂತರ ಪೊಲೀಸರು ಸ್ಥಳಕ್ಕೆ ಹೋಗಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಹೊನ್ನಾಳಿ ನಂತರ ಶಿವಮೊಗ್ಗ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇವರು ಕೃಷಿ ಹಾಗೂ ಇತರೇ ವ್ಯವಹಾರ ಮಾಡಿಕೊಂಡಿದ್ದರು. ಮೇಲ್ನೋಟಕ್ಕೆ ಇದೊಂದು ವೈಯಕ್ತಿಕ ಕಾರಣದಿಂದ ನಡೆದ ಘಟನೆ. ಯಾವುದೇ ರೀತಿಯ ಡೆತ್ ನೋಟ್ ಪತ್ತೆಯಾಗಿಲ್ಲ. ಮೊಬೈಲ್ ವಶಕ್ಕೆ ಪಡೆಯಲಾಗಿದ್ದು. ‌ಪರಿಶೀಲನೆ ಮಾಡಲಾಗುವುದು. ಆದರೆ, ಈ ಕುರಿತು ಯಾರೂ ದೂರು ನೀಡಿಲ್ಲ. ಈ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಬಿ.ಸಿ. ಪಾಟೀಲ್ ರಿಗೆ ಈ ಮಾಹಿತಿ ತಡವಾಗಿ ಗೊತ್ತಾಗಿದೆ ಎನ್ನಲಾಗಿದೆ. ಪ್ರತಾಪ್ ಅವರ ಸಹೋದರ ಪೊಲೀಸರಿಗೆ ತಿಳಿಸಿ ನಂತರ ಬಿ. ಸಿ ಪಾಟೀಲ್ ರಿಗೂ ವಿಚಾರ ಮುಟ್ಟಿಸಿದ್ದಾರೆ. ಬಳಿಕ ಬಿ.ಸಿ ಪಾಟೀಲ್ ಅಳಿಯನ ಮೊಬೈಲ್ ನಂಬರ್ ಹಾಗೂ ಕಾರು ನಂಬರ್ ಕೊಟ್ಟಿದ್ದಾರೆ. ನಮ್ಮ ಅಳಿಯ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಹೇಳಿದ್ದಾರೆ. ಕೂಡಲೇ ಅಳಿಯನನ್ನು ಪತ್ತೆ ಹಚ್ಚುವಂತೆ ಮನವಿ ಮಾಡಿದ್ದಾರೆ. ಪೊಲೀಸರು ಕಾರ್ ನಂಬರ್ ಹಾಗೂ ಮೊಬೈಲ್ ನಂಬರ್ ಟ್ರೇಸ್ ಮಾಡಿ ಪತ್ತೆ ಹಚ್ಚಿದ್ದಾರೆ. ಆ ವೇಳೆ ಕಾರಿನಲ್ಲಿ ವಿಷ ಸೇವಿಸಿ ನರಳಾಡುತ್ತಿದ್ದರು ಎನ್ನಲಾಗಿದೆ. ಕೂಡಲೇ ಪೊಲೀಸರು ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ಪ್ರತಾಪ್ ಅವರನ್ನು ದಾಖಲಿಸಿದ್ದಾರೆ. ಆದರೆ, ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಾವ ಬಿ.ಸಿ. ಪಾಟೀಲ್ ಹೇಳಿದ್ದಂತೆ ಮಕ್ಕಳಾಗಿಲ್ಲ ಎಂಬ ಕೊರಗು ಸಾವಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ.

Tags: B.C. What is the reason behind Patil's son-in-law's suicide?
ShareTweetSendShare
Join us on:

Related Posts

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

by Shwetha
August 11, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬಿರುಗಾಳಿ ಎದ್ದಿದೆ. ಮುಖ್ಯವಾಗಿ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದು ಸರ್ಕಾರದ ವರ್ಚಸ್ಸಿಗೆ ಧಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram