ಬೆಂಗಳೂರು: ಪ್ರತಿಬಾರಿ ಚುನಾವಣೆಗಳು ಬಂದಾಗ ಕೊನೆ ದಿನ ಟಿಕೆಟ್ ಅಂತಿಮಗೊಳಿಸುತ್ತಿದ್ದ ಕಾಂಗ್ರೆಸ್, ಈ ಬಾರಿ ಆರ್.ಆರ್ ನಗರ ಹಾಗೂ ಶಿರಾ ಕ್ಷೇತ್ರಕ್ಕೆ ಮೊದಲೇ ಟಿಕೆಟ್ ಘೋಷಣೆ ಮಾಡಿ ಆಖಾಡಕ್ಕೆ ಇಳಿದಿದೆ.
ಆದರೆ, ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್(candidates bjp jds) ಇನ್ನೂ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿಲ್ಲ. ಅಭ್ಯರ್ಥಿಗಳ ಹೆಸರು ಅಂತಿಮಗೊಳ್ಳದೇ ಇದ್ದರೂ ಕಮಲ-ತೆನೆ ಕಲಿಗಳು ಬಿರುಸಿನ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.
ಶಿರಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಈಗಾಗಲೇ ಬಿ ಫಾರಂ ವಿತರಿಸಿದ್ದಾರೆ. ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿ. ಡಿಕೆ ರವಿ ಪತ್ನಿ ಕುಸುಮಾ ಅವರಿಗೂ ಭಾನುವಾರ ಡಿ.ಕೆ ಶಿವಕುಮಾರ್ ಬಿ ಫಾರಂ ನೀಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಕಾಂಗ್ರೆಸ್ ಮುಹೂರ್ತ ನಿಗಧಿ ಮಾಡಿದೆ.

ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಗಳು ಉಪಚುನಾವಣಾ ಅಖಾಡದಲ್ಲಿ ಬಿರುಸಿನ ಪ್ರಚಾರ ಆರಂಭಿಸಿದ್ದರೆ, ಆಡಳಿತಾರೂಡ ಬಿಜೆಪಿ ಎರಡೂ ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳನ್ನು ಅಂತಿಮ ಮಾಡದೆ ಅಡಕತ್ತರಿಯಲ್ಲಿ ಸಿಲುಕಿದೆ.
ಆರ್.ಆರ್ ನಗರ ಕ್ಷೇತ್ರಕ್ಕೆ ಈ ಹಿಂದೆ ಕಾಂಗ್ರೆಸ್ನಿಂದ ಗೆದ್ದು ಬಿಜೆಪಿ ಸೇರಿರುವ ಮುನಿರತ್ನ ತಮಗೇ ಟಿಕೆಟ್ ಬೇಕೆಂದು ಹಠ ಹಿಡಿದು ಕುಳಿತಿದ್ದಾರೆ. ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸೇರಿರುವ ಸುಧಾಕರ್ ಸೇರಿದಂತೆ ಬಹುತೇಕ ನಾಯಕರು ಮುನಿರತ್ನ ಅವರಿಗೆ ಟಿಕೆಟ್ ನೀಡಬೇಕೆಂದು ಸಿಎಂ ಯಡಿಯೂರಪ್ಪ ಮೇಲೆ ಒತ್ತಡ ಹೇರುತ್ತಿದ್ದಾರೆ.

ಮತ್ತೊಂದೆಡೆ, ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮುನಿರತ್ನ ವಿರುದ್ಧ ಸೋತಿರುವ ತುಳಸಿ ಮುನಿರಾಜು ಕೂಡ ತಮಗೇ ಟಿಕೆಟ್ ಬೇಕೆಂದು ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದಾರೆ. ಬಿಜೆಪಿ ಕೋರ್ ಕಮಿಟಿ ಕೂಡ ಇಬ್ಬರ ಹೆಸರು ಶಿಫಾರಸು ಮಾಡಿ ಕೈತೊಳೆದುಕೊಂಡಿದೆ.
ಇನ್ನು ಶಿರಾ ಕ್ಷೇತ್ರಕ್ಕೆ ಬರುವುದಾದರೆ ಅಲ್ಲಿ ಮೂವರು ಆಕಾಂಕ್ಷಿಗಳು ಬಿಜೆಪಿ ಟಿಕೆಟ್ಗಾಗಿ ಪೈಪೋಟಿ ನಡೆಸಿದ್ದಾರೆ. ಹೀಗಾಗಿ ಶಿರಾ ಕ್ಷೇತ್ರದತ್ತ ಯಾವ ಬಿಜೆಪಿ ನಾಯಕರೂ ಇನ್ನೂ ತಲೆ ಹಾಕಿಲ್ಲ.
ಇನ್ನೂ, ಜೆಡಿಎಸ್ ಸ್ಥಿತಿ ವಿಭಿನ್ನ. ಹಾಗೂ ಹೀಗೂ ಶಿರಾ ಕ್ಷೇತ್ರಕ್ಕೆ ಮಾಜಿ ಶಾಸಕ ದಿ. ಬಿ ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮಗೆ ಟಿಕೆಟ್ ಘೋಷಿಸಿದ್ದು, ಪ್ರಚಾರ ಕಾರ್ಯವನ್ನೂ ಆರಂಭಿಸಿದೆ. ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಶಿರಾ ಅಖಾಡದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಆದರೆ, ಆರ್.ಆರ್ ನಗರ ಕ್ಷೇತ್ರಕ್ಕೆ ಟಿಕೆಟ್ ಹಂಚಿಕೆ ಗೊಂದಲ ಜೆಡಿಎಸ್ನಲ್ಲಿ ಇನ್ನೂ ಬಗೆಹರಿದಿಲ್ಲ. ಹೆಚ್.ಡಿ ದೇವೇಗೌಡರು ತೆನೆ ಅಭ್ಯರ್ಥಿಗಳು ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಆದರೆ, ಆರ್.ಆರ್ ನಗರಕ್ಕೆ ಅಭ್ಯರ್ಥಿ ಯಾರೂ ಎನ್ನುವುದನ್ನು ಇನ್ನೂ ಅಂತಿಮಗೊಳಿಸಿಲ್ಲ.
ಹೀಗಾಗಿ ಬಿಜೆಪಿ ಹಾಗೂ ಜೆಡಿಎಸ್ಗೆ (candidates bjp jds) ಆರ್.ಆರ್ ನಗರ ಕ್ಷೇತ್ರಕ್ಕೆ ಟಿಕೆಟ್ ಹಂಚಿಕೆಯೇ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಇಂದು ಎರಡೂ ಪಕ್ಷಗಳು ಉಪಚುನಾವಣಾ ಕಲಿಗಳ ಹೆಸರನ್ನು ಅಂತಿಮಗೊಳಿಸುತ್ತವಾ ಎಂಬುದನ್ನು ಕಾದು ನೋಡಬೇಕಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








