ನವದೆಹಲಿ: ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇದೊಂದು ನಕಲಿ ಎನ್ ಕೌಂಟರ್ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರ್ತಿದೆ. ಈ ಹಿನ್ನೆಲೆ ದುಬೆ ಎನ್ಕೌಂಟರ್ ಪ್ರಕರಣದ ತನಿಖೆಗೆ ರಚಿಸಲಾಗಿರುವ ತನಿಖಾ ಆಯೋಗಕ್ಕೆ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಚೌಹಾಣ್ ಅವರನ್ನು ಜಡ್ಜ್ ಆಗಿ ನೇಮಕ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಅಲ್ಲದೆ 3 ದಶಕಗಳಿಂದ ದುಬೆ ಪದೇ ಪದೇ ಜಾಮೀನು ಅಥವಾ ಪರೋಲ್ ಪಡೆದು ಜೈಲಿನಿಂದ ಬಿಡುಗಡೆಗೊಳ್ಳುತ್ತಿದ್ದ ಬಗ್ಗೆಯೂ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆಯೋಗಕ್ಕೆ ನಿರ್ದೇಶಿಸಿದೆ. 65ಕ್ಕೂ ಅಧಿಕ ಕೊಲೆ ಹಾಗೂ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ದುಬೆಗೆ ಇಷ್ಟು ಬಾರಿ ಬೇಲ್ ಸಿಗಲು ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಲಯ ಸೂಚಿಸಿದೆ.
ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...








