ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಿತಶತ್ರುಗಳ ವಿರುದ್ಧ “ಬಿಎಸ್ ವೈ ಕಟೀಲಾಸ್ತ್ರ” : ಆಡಿಯೋ ಮರ್ಮಾ.. ಕಾವಿ ಗುರಾಣಿ

Mahesh M Dhandu by Mahesh M Dhandu
July 20, 2021
in Newsbeat, Saaksha Special, ಎಸ್ ಸ್ಪೆಷಲ್
B S Yediyurappa Saakshatv
Share on FacebookShare on TwitterShare on WhatsappShare on Telegram

ಹಿತಶತ್ರುಗಳ ವಿರುದ್ಧ “ಬಿಎಸ್ ವೈ ಕಟೀಲಾಸ್ತ್ರ” : ಆಡಿಯೋ ಮರ್ಮಾ.. ಕಾವಿ ಗುರಾಣಿ

ನಾಯಕತ್ವ ಬದಲಾವಣೆ ವಿಚಾರ ರಾಜ್ಯದಲ್ಲಿ ಬೆಂಕಿ ಬಿರುಗಾಳಿಯನ್ನು ಎಬ್ಬಿಸಿದೆ. ಜುಲೈ 26ಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಕೆಳಗಿಳಿಯುತ್ತಾರೆ ಅನ್ನೋ ಸುದ್ದಿ ರಾಜ್ಯದಲ್ಲಿ ಸಂಚಲನ ಸೃಷ್ಠಿ ಮಾಡಿದೆ. ಮೇಲ್ನೊಟಕ್ಕೆ ಹೈಕಮಾಂಡ್ ನ ನಿರ್ಧಾರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಲೆ ಬಾಗಿದ್ದಾರೆ ಎಂದು ಕಾಣುತ್ತಿದ್ದರೂ, ಕಾವಿ ಗುರಾಣಿ ಮೂಲಕ ರಾಜಕೀಯ ಆಟ ಶುರು ಮಾಡಿದ್ದಾರೆ.

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಹಿತಶತ್ರುಗಳ ವಿರುದ್ಧ “ಬಿಎಸ್ ವೈ ಕಟೀಲಾಸ್ತ್ರ”

ಹೌದು..! ಮುಖ್ಯಮಂತ್ರಿ ಬಿಎಸ್ ವೈ ದೆಹಲಿ ಪ್ರವಾಸ ಮುಗಿಸಿ ಬರುತ್ತಿದ್ದಂತೆ ನಾಯಕತ್ವ ಬದಲಾವಣೆ ವಿಚಾರಕ್ಕೆ ರೆಕ್ಕೆಪುಕ್ಕಗಳು ಬಂದಿವೆ. ಪಕ್ಷದ ಬಿಗ್ ಬಾಸ್ ಗಳು ಬಿ ಎಸ್ ಯಡಿಯೂರಪ್ಪ ಅವರನ್ನ ಕೆಳಗಿಳಿಸಲು ನಿರ್ಧರಿಸಿದ್ದು, ಇದಕ್ಕಾಗಿ ಬ್ಲೂ ಪ್ರಿಂಟ್ ರೆಡ್ಡಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನ ಅರಿತಿರುವ ಯಡಿಯೂರಪ್ಪ ಮೇಲ್ನೋಟಕ್ಕೆ ಹೈಕಮಾಂಡ್ ವಿಧೇಯನಾಗಿದ್ದುಕೊಂಡೇ ರಾಜಕೀಯ ದಾಳ ಉರುಳಿಸಿದ್ದಾರಾ..? ಅನ್ನೋ ಪ್ರಶ್ನೆ ಈಗ ಉದ್ಭವವಾಗಿದೆ. ಯಾಕಂದ್ರೆ ಸದ್ಯ ಚರ್ಚೆಗೆ ಕಾರಣವಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋ ಹಿಂದೆ ಬಿಎಸ್ ವೈ ರಾಜಕೀಯ ತಂತ್ರ ಇದ್ಯಾ ಅನ್ನೋ ಅನುಮಾನ ವ್ಯಕ್ತವಾಗುತ್ತಿದೆ.

B S Yediyurappa Saaksha tv

ಕಟೀಲ್ ಆಡಿಯೋದಲ್ಲಿ ಶೆಟ್ಟರ್, ಈಶ್ವರಪ್ಪ ಟೀಂ ಅನ್ನು ಗುರಿಯಾಗಿಸಿಕೊಂಡು ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆದಿದೆ. ಇದು ಅನುಮಾನಕ್ಕೆ ಕಾರಣವಾಗಿದ್ದು, ಸಿಎಂ ಬದಲಾವಣೆ ಮಾಡೋದಾದ್ರೆ ಶೆಟ್ಟರ್, ಈಶ್ವರಪ್ಪಗೆ ಯಾಕೆ ಕೋಕ್ ಕೊಡಬೇಕು..? ಅದರಲ್ಲೂ ಶೆಟ್ಟರ್, ಈಶ್ವರಪ್ಪ ಅವರ ಪಕ್ಷ ನಿಷ್ಠೆಯಲ್ಲಿ ಯಾವುದೇ ಲೋಪವಿಲ್ಲ. ಪಕ್ಷ ಕಾಲಲ್ಲಿ ತೋರಿಸುವ ಕೆಲಸವನ್ನು ಈ ಇಬ್ಬರು ತಲೆ ಮೇಲೆ ಹೊತ್ತಿಕೊಂಡು ಮಾಡುತ್ತಾರೆ. ಇಂತಹ ನಾಯಕರ ಬಗ್ಗೆ ಕಟೀಲ್ ಮಾತನಾಡಿದ್ದೇಕೆ ಅನ್ನೋ ಪ್ರಶ್ನೆ ಸದ್ಯ ರಾಜಕೀಯ ಪಂಡಿತರಲ್ಲಿ ಕಾಡುತ್ತಿದೆ.

ಸಿಎಂ ಬದಲಾವಣೆಗೆ ಶೆಟ್ಟರ್, ಈಶ್ವರಪ್ಪ ಕುಮ್ಮಕ್ಕು

ಶೆಟ್ಟರ್, ಈಶ್ವರಪ್ಪ ಬಹಿರಂಗವಾಗಿ ಎಲ್ಲರೆದುರು ಬಿಎಸ್ ವೈಗೆ ಜೈ ಎನ್ನುತ್ತಿದ್ದರೂ ಅವರ ಕುರ್ಚಿ ಕೆಡವಲು ಈ ಇಬ್ಬರು ನಾಯಕರು ಪರೋಕ್ಷವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಿಎಂ ವಿರುದ್ಧ ಈಶ್ವರಪ್ಪಗೆ ಮುನಿಸಿರೋದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಇತ್ತ ಶೆಟ್ಟರ್ ಉತ್ತರ ಕರ್ನಾಟಕದವರಿಗೆ ಸಿಎಂ ಪಟ್ಟ ಸಿಗಬೇಕು ಅನ್ನೋ ಕಾರಣದಿಂದ ಬಿಎಸ್ ವೈ ಖೆಡ್ಡಾ ತೋಡುತ್ತಿದ್ದಾರೆ ಅನ್ನೋದು ಬಿಜೆಪಿ ಪಡಸಾಲೆಯಲ್ಲಿ ಸುತ್ತುತ್ತಿರುವ ಸುದ್ದಿ.

ಈ ಕಾರಣಕ್ಕಾಗಿ ಹಾಗೂ ಬಿಜೆಪಿ ಬಿಗ್ ಬಾಸ್ ಗಳಿಗೆ ತಮ್ಮ ತಾಕತ್ತು ತೋರಿಸಲು ಬಿಎಸ್ ಯಡಿಯೂರಪ್ಪ ಕಟೀಲಾಸ್ತ್ರ ಪ್ರಯೋಗಿಸಿದ್ದಾರಾ ಅನ್ನೋ ಪ್ರಶ್ನೆಗೆ ನಾಂದಿಯಾಡಿದೆ. ಯಾಕಂದ್ರೆ ಸಿಎಂ ದೆಹಲಿಯಿಂದ ಬರುತ್ತಿದ್ದಂತೆ ಕಟೀಲ್ ಆಡಿಯೋ ವೈರಲ್ ಆಯ್ತು. ಇದರ ಬೆನ್ನಲ್ಲೆ ಸಿಎಂ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಆದ್ರೂ ಬಿಎಸ್ ವೈ ಮಾತ್ರ ಎಲ್ಲೂ ತುಟಿ ಬಿಚ್ಚಿಲ್ಲ. ಇದಕ್ಕೆ ಕಾರಣವೇನು..?

ಕಟೀಲ್ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಲ್ಲ ಯಾಕೆ..? ಅನ್ನೋ ಪ್ರಶ್ನೆಯ ಜೊತೆಗೆ ಈ ಆಡಿಯೋವನ್ನು ಬಳಸಿಕೊಂಡು ತಮ್ಮ ವಿರೋಧಿಗಳಿಗೆ ಸಿಎಂ ಚೆಕ್ ಮೇಟ್ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ತಮ್ಮ ಬತ್ತಳಿಕೆಯಲ್ಲಿದ್ದ ಕಾವಿ ಅಸ್ತ್ರವನ್ನು ಮುಂದೆ ಬಿಟ್ಟು ರಾಜಕೀಯ ತಂತ್ರ ರೂಪಿಸಿ, ಪಕ್ಷದ ಹೈಕಮಾಂಡ್ ಮತ್ತು ವಿರೋಧಿಗಳಿಗೆ ತಮ್ಮನ್ನ ಸಿಎಂ ಸ್ಥಾನದಿಂದ ಕೆಳಗಿಳಿಸೋದು ಸುಲಭವಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರಾ ಯಡಿಯೂರಪ್ಪ ಕುತೂಹಲಕಾರಿ ಪ್ರಶ್ನೆ ಕಾಡುತ್ತಿದೆ.

Tags: #Saaksha TVB.s YediyurappaBJPCongressKarnatakacmNalin Kumar Kateel
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram