ಬೆಂಗಳೂರು: ದೇಶ ಗೆಲ್ಲಬೇಕಾದರೆ, ಬೂತ್ ಗೆಲ್ಲಬೇಕು. ಬೂತ್ ಗೆದ್ದರೆ ಮಾತ್ರ ದೇಶ ಗೆಲ್ಲುತ್ತೇವೆ ಎಂಬುವುದು ಹೈಕಮಾಂಡ್ ಗೆ ಗೊತ್ತಿದೆ. ಈ ರೀತಿಯಲ್ಲಿ ರಾಜ್ಯದ ಎಲ್ಲಾ ಬೂತ್ಗಳಲ್ಲಿಯೂ ಪಕ್ಷದ ಸಂಘಟನೆ ಬಲ ಪಡಿಸುತ್ತೇವೆ ಎಂದು ಬಿಜೆಪಿಯ (BJP) ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವು, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಪಕ್ಷದ ರಾಜ್ಯಾಧ್ಯಕ್ಷನಾದ ದಿನವೇ ಬೂತ್ ಅಧ್ಯಕ್ಷ ಶಶಿಧರ್ ಮನೆಗೆ ಬಂದಿದ್ದೇನೆ. ಈಗಿನ ಘಟಾನುಘಟಿ ನಾಯಕರೆಲ್ಲ ಬೂತ್ ಅಧ್ಯಕ್ಷರಾಗಿ ಬಂದವರು. ಅಧ್ಯಕ್ಷರಿಗೆ ಸಿಗುವ ಗೌರವ ಬೂತ್ ಅಧ್ಯಕ್ಷರಿಗೂ ಸಿಗುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದ ವಿಚಾರಕ್ಕೆ ಮಾತನಾಡಿದ ಅವರು, ನಮ್ಮ ಯಾವುದೇ ಕಾರ್ಯಕರ್ತರು ಹೋರಾಟಕ್ಕೆ ಹೆದರಿ ಕೂರುವವರಲ್ಲ. ಕಾಂಗ್ರೆಸ್ ಪಕ್ಷದವರು ಏನು ಮಾಡುತ್ತಾರೋ ಮಾಡಲಿ. ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.