ಕೊರೊನಾ ಮಾಹಮಾರಿಯ ವಿರುದ್ಧ ಹೋರಾಡಿ ಗೆದ್ದಿರುವ ಬಾಹುಬಲಿ ಖ್ಯಾತಿಯ ನಿರ್ದೇಶಕರಾದ ರಾಜಮೌಳಿ ಕುಟುಂಬ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. ಸೋಂಕು ದೃಢವಾಗಿದ್ದ ಹಿನ್ನೆಲೆ 2 ವಾರಗಳ ಕಾಲ ರಾಜಮೌಳಿ ಪರಿವಾರದವರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಇದೀಗ ಕ್ವಾರೆಂಟೈನ್ ಅವಧಿಯನ್ನು ಪೂರ್ಣಗೊಳಿಸಿರುವ ರಾಜಮೌಳಿ ಕುಟುಂಬಸ್ಥರು ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜಮೌಳಿ ಅವರು ಇದೀಗ ನಾವೆಲ್ಲರೂ ಸಂಪೂರ್ಣವಾಗಿ ಗುಣಮುಖರಾಗಿದ್ದೇವೆ. “2 ವಾರಗಳ ಕ್ವಾರಂಟೈನ್ ಅವಧಿ ಮುಗಿದಿದೆ. ಯಾವುದೇ ರೋಗ ಲಕ್ಷಣಗಳಿಲ್ಲ. ಕೊರೊನಾ ಟೆಸ್ಟ್ ಮಾಡಿಸಿದ್ದು, ಎಲ್ಲರ ರಿಪೋರ್ಟ್ ನೆಗೆಟಿವ್ ಬಂದಿದೆ. ಆದರೆ ಪ್ಲಾಸ್ಮ ದಾನಮಾಡಲು ಇನ್ನೂ 3 ವಾರಗಳು ಕಾಯಬೇಕು ಎಂದು ವೈದ್ಯರು ಹೇಳಿದ್ದಾರೆ.” ಆದರೆ ಪ್ಲಾಸ್ಮ ದಾನಕ್ಕೆ ಇನ್ನೂ ಮೂರು ವಾರಗಳು ಕಾಯಬೇಕೆಂದು ಸೂಚಿಸಿರುವುದಾಗಿ ರಾಜಮೌಳಿ ಬರೆದುಕೊಂಡಿದ್ದಾರೆ.
fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!
ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...








