ಬೆಂಗಳೂರು : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ ಐತಿಹಾಸಿಕ ತೀರ್ಪನ್ನು ಕೇಸರಿ ನಾಯಕರು ಸ್ವಾಗತಿಸಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಸ್ ಕೆ ಯಾದವ್ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ,
ಕಲ್ಯಾಣ್ ಸಿಂಗ್, ಸತೀಶ್ ಪ್ರಧಾನ್ ಸೇರಿದಂತೆ 32 ಆರೋಪಿಗಳನ್ನು ನಿರ್ದೋಷಿಗಳು ಎಂದು ತೀರ್ಪು ನೀಡಿದರು.
ಇದನ್ನೂ ಓದಿ : ಮಹತ್ವದ ತೀರ್ಪನ್ನು ಪೂರ್ಣ ಹೃದಯದಿಂದ ಸ್ವಾಗತಿಸಿದ್ದೇನೆ – ಎಲ್.ಕೆ.ಅಡ್ವಾಣಿ
ಈ ವಿಚಾರವಾಗಿ ಟ್ವೀಟ್ ಮಾಡಿರುವ ಬೊಮ್ಮಾಯಿ, ಬಾಬ್ರಿ ಮಸೀದಿ ಪ್ರಕರಣದಲ್ಲಿ ನಮ್ಮ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಶ್ರೀ ಮುರಳಿ ಮನೋಹರ ಜೋಶಿ, ಉಮಾಭಾರತಿ ಹಾಗೂ ಇತರರ ಮೇಲೆ ಇದ್ದ ಪ್ರಕರಣಕ್ಕೆ ಇಂದು ಲಕ್ನೋದ ಸಿಬಿಐ ನ್ಯಾಯಾಲಯವು ತೀರ್ಪು ನೀಡಿರುವುದು ಸ್ವಾಗತಾರ್ಹ.
28 ವರ್ಷಗಳ ನಂತರ ಅಡ್ವಾಣಿಯವರು ಅರೋಪ ಮುಕ್ತರಾಗಿದ್ದು ಮತ್ತು ಸುಪ್ರೀಂಕೋರ್ಟ್ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿರುವುದು ಐತಿಹಾಸಿಕ ತೀರ್ಪಾಗಿರುತ್ತದೆ.
ಇದು ಭಾರತದ ಜನರ ಭಾವನೆಗಳಿಗೆ ಸ್ಪಂದಿಸಿದಂತಾಗಿದ್ದು, ಭಾರತದ ಎಲ್ಲ ನಾಗರಿಕರು ಈ ತೀರ್ಪನ್ನು ಒಪ್ಪಿಕೊಂಡು ಶಾಂತಿ ಸೌರ್ಹಾದತೆಯನ್ನು ಕಾಪಾಡಿಕೊಳ್ಳುವಂತೆ ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ನಿರ್ಮಾಣಕ್ಕೆ ಅನುಮತಿ ನೀಡಿರುವುದು ಐತಿಹಾಸಿಕ ತೀರ್ಪಾಗಿರುತ್ತದೆ. ಇದು ಭಾರತದ ಜನರ ಭಾವನೆಗಳಿಗೆ ಸ್ಪಂದಿಸಿದಂತಾಗಿದ್ದು, ಭಾರತದ ಎಲ್ಲ ನಾಗರಿಕರು ಈ ತೀರ್ಪನ್ನು ಒಪ್ಪಿಕೊಂಡು ಶಾಂತಿ ಸೌರ್ಹಾದತೆಯನ್ನು ಕಾಪಾಡಿಕೊಳ್ಳುವಂತೆ ವಿನಂತಿಸುತ್ತೇನೆ.#BabriMasjidDemolitionCase #lkadvani #UmaBharti
— Basavaraj S Bommai (@BSBommai) September 30, 2020
ಇವರ ಜೊತೆಗೆ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರು ಟ್ವೀಟ್ ಮಾಡಿ, ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಪೂರ್ವನಿಯೋಜಿತ ಕೃತ್ಯ ಅಲ್ಲವೆಂದು ಲಖನೌ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಬಿಜೆಪಿ ಭೀಷ್ಮ ಶ್ರೀ ಲಾಲ್ ಕೃಷ್ಣ ಅಡ್ವಾಣಿ, ಹಿರಿಯ ನಾಯಕ ಶ್ರೀ ಮುರಳಿ ಮನೋಹರ್ ಜೋಶಿ ಸೇರಿದಂತೆ ಎಲ್ಲಾ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಸತ್ಯಮೇವ ಜಯತೆ ಎಂದು ತಿಳಿಸಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಪೂರ್ವನಿಯೋಜಿತ ಕೃತ್ಯ ಅಲ್ಲವೆಂದು ಲಖನೌ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಬಿಜೆಪಿ ಭೀಷ್ಮ ಶ್ರೀ ಲಾಲ್ ಕೃಷ್ಣ ಅಡ್ವಾಣಿ, ಹಿರಿಯ ನಾಯಕ ಶ್ರೀ ಮುರಳಿ ಮನೋಹರ್ ಜೋಶಿ ಸೇರಿದಂತೆ ಎಲ್ಲಾ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಸತ್ಯಮೇವ ಜಯತೆ!#BabriDemolitionCase pic.twitter.com/vAkdILqIRx
— Dr Sudhakar K (@mla_sudhakar) September 30, 2020