ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾವ್ ಅವರ 113 ನೇ ಜನ್ಮ ದಿನಾಚರಣೆ ಆಚರಿಸಲಾಯಿತು.ಸಿ.ಎಂ ಯಡಿಯೂರಪ್ಪ ಅವರು ವಿಧಾನ ಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಬಾಬು ಜಗಜೀವನ ರಾಮ್ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಪುಷ್ಪ ಅರ್ಪಣೆ ಮಾಡಿದರು. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜನ್ಮ ದಿನಾಚರಣೆ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ
ಡಿಸಿಎಂ ಗೋವಿಂದ ಕಾರಜೋಳ, ಸಚಿವ ಸೋಮಣ್ಣ , ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಕಾರ್ಯಕ್ರಮದ ಬಳಿಕ ಮಾತನಾಡಿದ ಸಿ.ಎಂ ಯಡಿಯೂರಪ್ಪ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಮ್ ಅವರು ಶೋಷಿತರ ಹಕ್ಕಿಗಾಗಿ ಹೋರಾಡಿದವರು. ಹಸಿರು ಕ್ರಾಂತಿಯ ಹರಿಕಾರ.
ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ರು, ಕೃಷಿ, ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ರು, ಅವರ ಸೇವೆ ಸ್ಮರಣೀಯವಾದದು.ಅವರ ಜೀವನ ಚರಿತ್ರೆ ಯುವ ಪೀಳಿಗೆಗೆ ತಲುಪಿಸುವ ಕಾರ್ಯ ನಡೆಯಬೇಕು. ಇದೆ ವೇಳೆ ಮಾಜಿ ಸಿಎಂ ಕುಮಾರ ಸ್ವಾಮಿ ಸರಣಿ ಟ್ವಿಟ್ ವಿಚಾರದ ಬಗ್ಗೆ ಮಾದ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆ ಯಡಿಯೂರಪ್ಪ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಪ್ರಶ್ನೆ ಕೇಳಿದೊಡನೆ ಪ್ರತಿಕ್ರಿಯೆ ನೀಡದೆ ಹೊರಟರು
49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!
49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್ಲೈನ್ನಲ್ಲಿ ಊಟ ಆರ್ಡರ್...








