Bagalkot ಬಾಗಲಕೋಟೆ | ಲಾರಿಗೆ ಕಾರು ಡಿಕ್ಕಿ : ನಾಲ್ವರು ಸಾವು
ಬಾಗಲಕೋಟೆ : ಅಪರಿಚಿತ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಕೊನೆಯುಸಿರೆಳೆದಿರುವ ಘಟನೆ ಹುನಗುಂದ ತಾಲೂಕಿನ ಬೇವಿನಮಟ್ಟಿ ಗ್ರಾಮದಲ್ಲಿ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದವರನ್ನ ಚಂದ್ರು ಬುಟ್ಟಾ, ನವೀನ ಸಾಕಾ, ಕರಿಬಸಯ್ಯ ಎಂದು ಗುರುತಿಸಲಾಗಿದ್ದು, ಇನ್ನೊಬ್ಬನ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಇನ್ನು ಘಟನೆಯಲ್ಲಿ ಚಾಲಕ ವಿಜಯ ಬಂಡಿ ಗಂಭೀರ ಗಾಯಗೊಂಡಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುನಗುಂದ ಪಿಎಸ್ ಐ, ಸಿಪಿಐ ಸೇರಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತು ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
