ಬೆಂಗಳೂರು: ಡ್ರಗ್ಸ್ ಜಾಲದ ನಂಟಿನೊಂದಿಗೆ ಶಾಮೀಲಾದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆ ಕೆಲವೇ ಕ್ಷಣಗಳಲ್ಲಿ ನಡೆಯಲಿದೆ.
ಮಧ್ಯಾಹ್ನ 3 ಗಂಟೆಗೆ ಜಾಮೀನು ಅರ್ಜಿ ವಿಚಾರಣೆ ಆರಂಭವಾದರೆ, ಅದಕ್ಕೂ ಮೊದಲೇ ಮಧ್ಯಾಹ್ನ 1 ಗಂಟೆಗೆ ಸಿಸಿಬಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ನಟಿ ರಾಗಿಣಿ ದ್ವಿವೇದಿ ಅವರ ಸಿಸಿಬಿ ಕಸ್ಟಡಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ 1 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎನ್ಡಿಎಂ ಕೋರ್ಟ್ ಮುಂದೆ ಪೊಲೀಸರು ಹಾಜರುಪಡಿಸುವ ಸಾಧ್ಯತೆ ಇದೆ. ರಾಗಿಣಿ ಜತೆಗೆ ಆಕೆ ಬಾಯ್ ಫ್ರೆಂಡ್ ರವಿಶಂಕರ್ ಸಿಸಿಬಿ ಕಸ್ಟಡಿ ಕೊನೆಗೊಳ್ಳಲಿದ್ದು, ಆತನನ್ನು ಕೂಡನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ಈ ನಡುವೆ, ರಾಗಿಣಿ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ, ಹೀಗಾಗಿ ಇನ್ನಷ್ಟು ದಿನ ವಿಚಾರಣೆ ನಡೆಸುವ ಅಗತ್ಯವಿದೆ. ಹೀಗಾಗಿ ಇನ್ನಷ್ಟು ದಿನ ವಶಕ್ಕೆ ನೀಡುವಂತೆ ಸಿಸಿಬಿ ಪೊಲೀಸರು ನ್ಯಾಯಾಧೀಶರ ಮುಂದೆ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆ ಇದೆ.
ಇದೇ ವೇಳೆ, ರಾಗಿಣಿ ವಿರುದ್ಧ ಸಿಸಿಬಿ ಪೊಲೀಸರು ದಾಖಲಿಸಿರುವ ಪ್ರಕರಣಗಳು ನಿರಾಧಾರ. ಅವರು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಅವರಿಗೆ ಜಾಮೀನು ನೀಡಬೇಕು ಎಂದು ರಾಗಿಣಿ ಪರ ವಕೀಲರು ನ್ಯಾಯಾಧೀಶರಲ್ಲಿ ಮನವಿ ಮಾಡುವ ಸಾಧ್ಯತೆ ಇದೆ. ಎರಡು ಕಡೆಗಳ ವಾದ ಆಲಿಸಿದ ನ್ಯಾಯಧೀಶರು ಜಾಮೀನು ನೀಡುತ್ತಾರಾ, ಮತ್ತೆ ಸಿಸಿಬಿ ಕಸ್ಟಡಿಗೆ ನೀಡುತ್ತಾರಾ ಅಥವಾ ನ್ಯಾಯಾಂಗ ಬಂಧನಕ್ಕೆ ನೀಡಿ ಜೈಲಿಗೆ ಕಳಿಸುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.
Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!
ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...








