ಕೊರೊನಾ ಆತಂಕದ ನಡುವೆಯೇ ಇಡೀ ದೇಶಾದ್ಯಂತ ಅತ್ಯಂತ ಶ್ರದ್ಧೆ ಭಕ್ತಿಂದ ಹಿಂದೂಗಳು ವರಮಹಾಲಕ್ಷ್ಮಿ ಹಬ್ಬ ಆಚರಣೆ ಮಾಡಿದ್ರೆ. ಮತ್ತೊಂದೆಡೆ ಮುಸ್ಲಿಂ ಬಾಂಧವರು ಮಸೀದಿಗೆ ತೆರಳಿ ಸುರಕಕ್ಷತಾ ಕ್ರಮಗಳನ್ನು ಪಾಲಿಸುವ ಮೂಲಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಮುಂಜಾನೆ 6 ಗಂಟೆಯಿಂದಲೇ ಎಲ್ಲಾ ಮಸೀದಿಗಳಲ್ಲೂ ಪ್ರಾರ್ಥನೆಗೆ ಅವಕಾಶ ಮಾಡಿಕೊಡಲಾಗಿತ್ತು. ಅದರಂತೆ ತಂಡಗಳಾಗಿ ತೆರಳಿದ ಜನರು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ನಮಾಜ್ ಮಾಡಿರುವ ದೃಷ್ಯಗಳು ಕಂಡುಬಂದಿವೆ. ಪ್ರತಿ ಬಾರಿ ಬಕ್ರೀದ್ ಹಬ್ಬ ಬಂತೆಂದರೆ ಸಾಕು ಎಲ್ಲೆಡೆ ಹಬ್ಬದ ವಾತಾವರಣ ಕಳೆಗಟ್ಟುತ್ತಿತ್ತು. ಈ ಬಾರಿ ಕೊರೊನಾ ಬಿಕ್ಕಟ್ಟಿನಿಂದಾಗಿ ಮಸೀದಿಗಳಲ್ಲಿ ಅಷ್ಟಾಗಿ ಜನದಟ್ಟಣೆ ಕಂಡುಬಂದಿಲ್ಲ. ಸರಳವಾಗಿ ಬಕ್ರೀದ್ ಹಬ್ಬವನ್ನು ಇಡೀ ದೇಶದ ಜನರು ಆಚರಣೆ ಮಾಡಿದ್ದಾರೆ.
ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು
ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...








