ರಾಜ್ಯಕ್ಕೆ ಒಳ್ಳೆದಾಗ್ಬೇಕು ಅಂದ್ರೆ ಜೆಡಿಎಸ್ ಅಧಿಕಾರಕ್ಕೆ ಬರಬೇಕು : ಬಂಡೆಪ್ಪ ಖಾಶೆಂಪೂರ
ಬೀದರ್ : ರಾಜ್ಯಕ್ಕೆ ಒಳ್ಳಯದಾಗಬೇಕು ಅಂದ್ರೆ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ಕಾಂಗ್ರೆಸ್ – ಬಿಜೆಪಿ ಮನೆಗೆ ಹೋಗಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪೂರ ಹೇಳಿದ್ದಾರೆ.
ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬಂಡೆಪ್ಪ ಖಾಶೆಂಪೂರ, ಬಸವಕಲ್ಯಾಣ, ಹತ್ಯಾಳ, ಹಾರಕೂಡ, ಸಿರಗಾಪೂರ, ಗದಲೇಗಾಂವ್, ಮೈಸಲಗಾ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಪರ ಮತಯಾಚನೆ ಮಾಡಿದರು. ಈ ವೇಳೆ ಜನರನ್ನ ಉದ್ದೇಶಿಸಿ ಮಾತನಾಡಿದ ಅವರು, ಈ ಮೇಲಿನ ಹೇಳಿಕೆ ನೀಡಿದರು.
ಇದೇ ವೇಳೆ ಬಿಜೆಪಿ ಸಂಸದರ ವಿರುದ್ಧ ಬೆಂಕಿಕಾರಿದ ಅವರು, ರಾಜ್ಯದಿಂದ 25 ಮಂದಿ ಬಿಜೆಪಿ ಸಂಸದರು ಆಯ್ಕೆಯಾಗಿದ್ದಾರೆ. ಆದ್ರೆ ಅವರು ಯಾವತ್ತಾದ್ರು ರಾಜ್ಯದ ಪರ ಧ್ವನಿ ಎತ್ತಿದ್ದಾರಾ ಎಂದು ಪ್ರಶ್ನೆ ಮಾಡಿದರು.
ಬಳಿಕ ರಾಷ್ಟ್ರೀಯ ಪಕ್ಷಗಳ ವಿರುದ್ಧ ಗುಡುಗಿ, ಕಾಂಗ್ರೆಸ್-ಬಿಜೆಪಿಯವರು ಮ್ಯಾಚ್ ಪಿಕ್ಸಿಂಗ್ ಗಿರಾಕಿಗಳು.
ಕಾಂಗ್ರೆಸ್ ನವ್ರು ಅಧಿಕೃತವಾಗಿ ವಿರೋಧ ಪಕ್ಷದ ಸ್ಥಾನದಲ್ಲಿದ್ದಾರೆ. ಆದ್ರೆ, ಅವ್ರು ಯಾವತ್ತಾದ್ರು ರಾಜ್ಯ ಸರ್ಕಾರದ ಒಂದೇ ಒಂದು ಹಗರಣವನ್ನು ಬಯಲಿಗೆಳೆದಿದ್ದಾರಾ.. ಎಂದು ಪ್ರಶ್ನೆ ಮಾಡಿದರು.