Bangalore Crime ಲಿವ್ ಇನ್ ರಿಲೇಶನ್ ಶಿಪ್ನ ಅಪರಾಧ ಸಂಕೆಗಳು ಹೆಚ್ಚುತ್ತಿರುವ ಬೆನ್ನಲೆ ಬೆಂಗಳೂರಿನಲ್ಲಿ ಇದೆ ರೀತಿಯ ಘಟನೆ ಯೊಂದು ನಡೆದಿದೆ.
ನೇಪಾಳ ಮೂಲದ 23 ವರ್ಷದ ಕೃಷ್ಣಕುಮಾರಿ ಕೊಲೆಯಾದ ಯುವತಿ ಯಾಗಿದ್ದಾಳೆ. ಇವಳ ಪ್ರೇಮಿ ಯಾದ 27 ವರ್ಷದ ಸಂತೋಷ್ ದಾಮಿ ಹತ್ಯೆಮಾಡಿದ ಮಾಡಿದ ಆರೋಪಿಯಾಗಿದ್ದು . ಕೃಷ್ಣ ಕುಮಾರಿ ಹೊರಮಾವು ಯೂನಿಸೆಕ್ಸ್ ಸ್ಪಾದಲ್ಲಿ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಳು. ಸಂತೋಷ್ ಟಿ.ಸಿ ಪಾಳ್ಯದಲ್ಲಿ ಬಾರ್ಬರ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ .
ಇಬ್ಬರಿಗೂ ಪರಿಚಯವಾಗಿ ಪ್ರೇಮ ಶುರುವಾಗಿತ್ತು ಅದಾದ ಬಳಿಕ ಕೃಷ್ಣಕುಮಾರಿ ಹಾಗೂ ಸಂತೋಷ್ ಇಬ್ಬರು ಸೇರಿ ರಾಮೂರ್ತಿನಗರದ ಟಿಸಿಪಾಳ್ಯದಲ್ಲಿ ಬಾಡಿಗೆ ಮನೆ ಮಾಡಿದ್ದರು ಒಂದೆ ಮನೆಯಲ್ಲೆ ಇಬ್ಬರೂ ವಾಸಿಸುತ್ತಿದ್ದರು.
ಆದರೆ ಇಂದು ಬೆಳಗ್ಗೆ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಜಗಳ ತಾರಕ್ಕೇರಿದ್ದು ಕೃಷ್ಣಕುಮಾರಿಯನ್ನು ಸಂತೋಷ್ ದಾಮಿ ಹತ್ಯೆ ಮಾಡಿದ್ದಾನೆ .
ಈ ಘಟನೆ ಸಂಬಂಧ ರಾಮೂರ್ತಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಂದು ವರ್ಷದ ಹಿಂದೆ ಈ ಇಬ್ಬರೂ ಬೆಂಗಳೂರಿಗೆ ಬಂದಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ .