Bangalore | ದಲಿತ ಸಂಘಟನೆಗಳ ಬೃಹತ್ ಮೆರವಣಿಗೆ.. ವಿದ್ಯಾರ್ಥಿಗಳ ಬೆಂಬಲ Bangalore- DALIT ORGANISATIONS HELD MARCH saaksha tv
ಬೆಂಗಳೂರು : ಅಂಬೇಡ್ಕರ್ ಫೋಟೋ ತೆರವು ಮಾಡಿಸಿದ ಆರೋಪದ ಮೇಲೆ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪಾಟೀಲ್ ಅವರ ವಜಾಗೆ ಆಗ್ರಹಿಸಿ ಇಂದು ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಮೈಸೂರು ವಿಶ್ವವಿದ್ಯಾಲದ ವಿದ್ಯಾರ್ಥಿಗಳ ಒಕ್ಕೂಟಗಳು ಮತ್ತು ದಲಿತ ಸಂಘಟನೆಗಳು ಬೃಹತ್ ಮೆರವಣಿಗೆ ಹಮ್ಮಿಕೊಂಡಿವೆ.
ಮೈಸೂರಿನ ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಈ ಮೆರವಣಿಗೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಬೆಂಗಳೂರು ವಿವಿಯಿಂದ ಮೆರವಣಿಗೆ ಮೂಲಕ ವಿದ್ಯಾರ್ಥಿಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಸೇರಿಕೊಂಡರು. ಅಲ್ಲಿ ರಾಜ್ಯದ ವಿವಿಧ ಆಗಮಿಸಿದ್ದ ವಿವಿಧ ದಲಿತ ಪರ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗಿಯಾಗಿದ್ರು. ಅಲ್ಲಿಂದ ಆನಂದ್ ರಾವ್ ವೃತ್ತದ ಮೇಲ್ ಸೇತುವೆ ಮೂಲಕ ಬೃಹತ್ ಮೆರವಣಿಗೆ ಹೊರಟರು.
ಸಾವಿರಾರು ಮಂದಿ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ಹೊರಟಿದ್ದರಿಂದ ಮೇಲುಸೇತುವೆಯಲ್ಲಿ ವಾಹನ ಸಂಚಾರ ಕೆಲಕಾಲ ಅಸ್ಥವ್ಯಸ್ಥಗೊಂಡಿತ್ತು.
ಇತ್ತ ಪ್ರತಿಭಟನಾಕಾರರು ಅಂಬೇಡ್ಕರ್ ಭಾವಚಿತ್ರ ಹಿಡಿದು ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಹೊರಟಿದ್ದು ಮಾರ್ಗ ಮಧ್ಯದ ಫ್ರೀಡಂ ಪಾರ್ಕ್ ಬಳಿ ಪೊಲೀಸರು ತಡೆದರು.
ಮೈಸೂರಿನ ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಆರಂಭವಾಗಿರುವ ರ್ಯಾಲಿಯಲ್ಲಿ ನಟ ಚೇತನ್, ದಲಿತ ಮುಖಂಡರಾದ, ಹೆಣ್ಣೂರು ಶ್ರೀನಿವಾಸ್, ಮಾವಳ್ಳಿ ಶಂಕರ್. ಎಂ ವೆಂಕಟಸ್ವಾಮಿ, ಜಿಗಣಿ ಶಂಕರ್, ಕೇಶವಮೂರ್ತಿ ಇನ್ನಿತರ ಮುಖಂಡರು ಭಾಗವಹಿಸಿದ್ದರು.









