ಪರಪ್ಪನ ಅಗ್ರಹಾರಕ್ಕೆ ಗೃಹ ಸಚಿವ ದಿಢೀರ್ ಭೇಟಿ
ಬೆಂಗಳೂರು : ನಗರದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತವೆ ಎಂಬ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಕಾರಾಗೃಹಕ್ಕೆ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಸಚಿವರು, ಕೆಲವು ಹೈ ಸೆಕ್ಯೂರಿಟಿ ಬ್ಯಾರಕ್ ಗಳ ಪರಿಶೀಲನೆ ಹಾಗೂ ಮೊಬೈಲ್ ಅಥವಾ ಇನ್ನಿತರ ನಿಷೇಧಿತ ವಸ್ತುಗಳನನ್ನು ಜೈಲಿನೊಳಗೆ ಸಾಗಿಸಲಾಗಿದೆಯೇ ಎಂಬುದರ ಬಗ್ಗೆ ವಿಚಾರಣೆ ಮಾಡುವುದಲ್ಲದೆ, ಸ್ವತಃ ತಪಾಸಣೆ ನಡೆಸಿದ್ದಾರೆ.
ತಮ್ಮ ಭೇಟಿಯ ಸಮಯದಲ್ಲಿ, ಕಾರಾಗೃಹದಲ್ಲಿ, ಮಹಿಳಾ ಕೈದಿ ಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಚಿವರು ಕೈದಿಗಳ ಜತೆಗೆ ಸಂವಾದ ನಡೆಸಿದರು.

ಕಳೆದ ಒಂದು ವಾರದಲ್ಲಿ ಕಾರಾಗೃಹ ಅಧಿಕಾರಿಗಳು ಏಳು ಮಂದಿಯ ವಿರುದ್ಧ ವಿವಿಧ ಆರೋಪಗಳ ಕುರಿತು, ಮೊಕದ್ದಮೆ ದಾಖಲಿಸಿದ್ದಾರೆ.
ಈ ಪೈಕಿ ನಾಲ್ಕು ಮಂದಿಯನ್ನು ಬಂಧಿಸಿದ್ದು, ಅವರಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಹ ಇದ್ದಾರೆ.
ಒಂದು ಮೊಬೈಲ್, ಹಾಗೂ ಗಾಂಜಾ ಹಾಗೂ ಮಾದಕ ದ್ರವ್ಯಗಳನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಜೈಲು ಸಿಬ್ಬಂದಿ ಸಚಿವರಿಗೆ ಮಾಹಿತಿ ನೀಡಿದ್ದಾರೆ.