ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Bangalore | ಪುರುಷ ಮತ್ತು ಮಹಿಳೆ ನಡುವೆ ಸ್ಪರ್ಧೆ ಇರಬಾರದು ಸಹಕಾರ ಇರಬೇಕು

Mahesh M Dhandu by Mahesh M Dhandu
March 25, 2022
in Hale Mysore, Newsbeat, ಬೆಂಗಳೂರು
Share on FacebookShare on TwitterShare on WhatsappShare on Telegram

Bangalore | ಪುರುಷ ಮತ್ತು ಮಹಿಳೆ ನಡುವೆ ಸ್ಪರ್ಧೆ ಇರಬಾರದು ಸಹಕಾರ ಇರಬೇಕು

ಮಹಿಳಾ ಸಾಧಕಿಯರಿಗೆ ಬೆಂಗಳೂರು ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

August 14, 2026

ಬೆಂಗಳೂರು : ಬೆಂಗಳೂರು ನಗರ ಸಾಧಕರು ಎಂದರೆ ವಿಶ್ವ ಮಟ್ಟದ ಸಾಧಕರು, ಅವಕಾಶಗಳ ತವರು ಬೆಂಗಳೂರು ವಿಶ್ವಕ್ಕೆ ಸಲ್ಲುವಂತಹದ್ದು. ಇಂತಹ ನಗರದಲ್ಲಿ ಸಾಧನೆ ಮಾಡಿದ ಮಹಿಳೆಯರು ಅಪರೂಪ ಮತ್ತು ಬಹಳ ವಿಶೇಷವಾದದ್ದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಬಿ ಪ್ಯಾಕ್, ಬಿ ಕ್ಲಿಪ್ ಹಳೆ ವಿದ್ಯಾರ್ಥಿ ಸಂಘ ಮತ್ತು ಶ್ರೀ ಕೃಷ್ಣ ವೆಲ್ ನೆಸ್ ಯೋಗ ಮತ್ತು ಸಾಂಸ್ಕೃತಿಕ ಕೇಂದ್ರದ ವತಿಯಿಂದ ಬೆಂಗಳೂರಿನ ೧೯೮ ಮಹಿಳಾ ಸಾಧಕಿಯರಿಗೆ ಬೆಂಗಳೂರು ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಸಚಿವರು, ಬೆಂಗಳೂರು ನಗರ ಸಾಧಕರು ಎಂದರೆ ವಿಶ್ವ ಮಟ್ಟದ ಸಾಧಕರು, ಅವಕಾಶಗಳ ತವರು ಬೆಂಗಳೂರು ವಿಶ್ವಕ್ಕೆ ಸಲ್ಲುವಂತಹದ್ದು. ಇಂತಹ ನಗರದಲ್ಲಿ ಸಾಧನೆ ಮಾಡಿದ ಮಹಿಳೆಯರು ಅಪರೂಪ ಮತ್ತು ಬಹಳ ವಿಶೇಷವಾದದ್ದು. ನಿಮ್ಮೆಲ್ಲರ ಸಾಧನೆ ವಿಶ್ವಕ್ಕೆಲ್ಲ ಮಾದರಿಯಾದದ್ದು. ನಿಮ್ಮೆಲ್ಲರ ಸಾಧನೆಯನ್ನು ಗುರುತಿಸಿ, ಬೆನ್ನುತಟ್ಟಿ ಪ್ರೋತ್ಸಾಹ ನೀಡುವುದರ ಜೊತೆಗೆ ಎಲ್ಲರಿಗೂ ಪ್ರೇರಣೆಯಾಗಲಿ ಎಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದು ಅತ್ಯಂತ ಶ್ಲಾಘನೀಯ ಎಂದರು.

ಇದೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಈಸ್ಟ್ ವೆಸ್ಟ್ ಕಾಲೇಜ್ ನ ಚೇರ್ ಮೆನ್ ರಶ್ಮಿ ರವಿ ಕುಮಾರ್ ಅವರು, ಹೇಗೆ ಪ್ರತಿ ಪುರುಷನ ಸಾಧನೆಯಿಂದ ಮಹಿಳೆ ಇರ್ಥಳೋ ಅದೇ ರೀತಿ ಮಹಿಳೆಯ ಸಾಧನೆ ಹಿಂದೆ ಪುರುಷನ ಬೆಂಬಲ ಇರುತ್ತದೆ. ಸಮಾಜದಲ್ಲಿ ಪುರುಷರು ಮತ್ತು ಮಹಿಳೆಯರು ಸಮಾನವಾಗಿ ಹೆಜ್ಜೆ ಹಾಕಬೇಕು. ಪುರುಷ ಮತ್ತು ಮಹಿಳೆ ನಡುವೆ ಸ್ಪರ್ಧೆ ಇರಬಾರದು ಸಹಕಾರ ಇರಬೇಕು. ಈಗಾಗಿ ದ್ದಲ್ಲಿ ಉತ್ತಮ ಮತ್ತು ಮೌಲ್ಯಯುತ ಸಮಾಜ ನಿರ್ಮಾಣವಾಗಲು ಸಾಧ್ಯ. ನಮ್ಮ ಸರ್ಕಾರಗಳೂ ಮಹಿಳಾ ಸಬಳೀಕರಣಗೊಳಿಸಲು ಅನೇಕ ಕಾರ್ಯಕ್ರಮಗಳನ್ನು ರೂಪಿಸುತ್ತಿವೆ, ಅದರ ಸದುಪಯೋಗಪಡೆದುಕೊಂಡಾಗ ಮಾತ್ರ ನಮ್ಮ ದೇಶದ ನಾರೀಯರ ಶಕ್ತಿಯೂ ಪ್ರಭಾವಿಸುತ್ತದೆ ಎಂದು ಪ್ರತಿಪಾದಿಸಿದರು.

bangalore-rashmi ravi kiran bangalore women achievers award saaksha tv

ಮಹಿಳೆಯರು ಸುರಕ್ಷಿತರಾಗಿ, ಸ್ವಾವಲಂಬಿಗಳಾಗಿ, ಔದ್ಯಮಿಕವಾಗಿಪ್ರಗತಿ ಹೊಂದಿದಾಗ ಮಾತ್ರ ಮೌಲ್ಯಯುತ ಗುಣಮಟ್ಟದ ಜೀವನನಡೆಸಲು ಸಾಧ್ಯ. ಮಹಿಳೆಯರ ಕೌಶಲ್ಯಾಭಿವೃದ್ಧಿಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡರೆ, ನಿಜಕ್ಕೂ ದೇಶದ ಅಭಿವೃದ್ಧಿ ಮಾನದಂಡದಲ್ಲಿ ಮಹತ್ತರವಾದ ಬದಲಾವಣೆ ತರಲು ಸಾಧ್ಯ. ಮಹಿಳಾಸಬಲೀಕರಣ ಕಾರ್ಯಕ್ರಮಗಳು ಮಹಿಳೆಯರ ಆತ್ಮಬಲ ಹಾಗೂ ದಕ್ಷತೆಯನ್ನು ವೃದ್ಧಿಸುತ್ತದೆ ಎಂದರು.

ಮಹಿಳೆಯರಲ್ಲಿ ಅಪಾರವಾದ ಶಕ್ತಿಯಿದೆ. ಅವರಿಗೆ ಉತ್ತೇಜನ ನೀಡುವ ಕೆಲಸವಾಗಬೇಕಿದೆ. ಮಹಿಳೆಯರಲ್ಲಿ ಅವರಲ್ಲಿರುವ ಸಾಮರ್ಥ್ಯದ ಬಗ್ಗೆ ಅರಿವು ಮೂಡಿಸಬೇಕಿದೆ. ಅಗತ್ಯ ಮೂಲಭೂತ ಶಿಕ್ಷಣ, ಔದ್ಯೋಗಿಕ ಹಾಗೂ ಔದ್ಯಮಿಕಪ್ರೋತ್ಸಾಹದ ಜೊತೆಗೆ ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡಬೇಕಿದೆ ಎಂದು ರಶ್ಮಿ ರವಿ ಕುಮಾರ್ ಹೇಳಿದ್ದಾರೆ.

ಸ್ವಾವಲಂಬನೆ ಅನ್ನೋದನ್ನು ಕಲಿಯುವ ವಯಸ್ಸಿನಲ್ಲೇ ಮೈಗೂಡಿಸುವಂತೆ ಮಾಡಬೇಕು. ಓದುವ ಹದಿಹರೆಯದ ಯುವತಿಯರಿಗೆ ಅವರ ಗುರಿಯ ಬಗ್ಗೆ ನಿಖರತೆ ಮೂಡಿಸಬೇಕು. ಅವರ ಸಮಸ್ಯೆಗಳಿಗೆ ಸ್ಪಂದಿಸುವಂತಹ ಕೆಲಸ ಮಾಡಬೇಕು. ಅವರ ಆಸಕ್ತಿಗೆ ಪ್ರೋತ್ಸಾಹ ನೀಡಬೇಕು. ಆಗ ಮಹಿಳೆಯೂ ಸಮಾಜಕ್ಕೆ ದೇಶಕ್ಕೆ ಮಹತ್ವದ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂಬುದು ರಶ್ಮಿ ರವಿಕುಮಾರ್ ಅವರ ಅಭಿಮತವಾಗಿದೆ.

bangalore-rashmi ravi kiran bangalore women achievers award saaksha tv

ಕಲಿಕೆ, ಶ್ರಮಿಕ ಮತ್ತು ನಾಯಕತ್ವ. ಈ ಮೂರು ವಿಚಾರಗಳಲ್ಲಿ ಮಹಿಳೆಯರು ಕಲಿಕೆ ಮತ್ತು ಶ್ರಮೀಕ ವಿಚಾರದಲ್ಲಿ ಮುಂದಿದ್ದಾರೆ. ಆದ್ರೆ ನಾಯಕತ್ವದ ವಿಚಾರದಲ್ಲಿ ಮಹಿಳೆ ಹಿಂದಿದ್ದಾಳೆ. ಹೀಗಾಗಿ ಮಹಿಳೆಯರಲ್ಲಿ ನಾಯಕತ್ವದ ಗುಣ ಲಕ್ಷಣಗಳನ್ನು ಬೆಳೆಸುವಂತಹ ಕಾರ್ಯವಾಗಬೇಕಿದೆ ಎಂದು ರಶ್ಮಿ ರವಿ ಕುಮಾರ್ ಸಲಹೆ ನೀಡಿದ್ದಾರೆ.

ಔದ್ಯೋಗಿವಾಗಿ ಅಥವಾ ಔದ್ಯಮಿಕವಾಗಿ ಮಹಿಳೆಯರಿಗೆ ಉತ್ತೇಜನನೀಡುವ ಕೆಲಸವನ್ನುನಮ್ಮ ಸಮಾಜ ಮಾಡಲೇಬೇಕು. ತೊಟ್ಟಿಲು ತೂಗುವ ಕೈ ದೇಶವನ್ನು ಆಳಿದ ನಿದರ್ಶನಗಳು ನಮ್ಮ ಇತಿಹಾಸದಲ್ಲಿವೆ. ಇವತ್ತಿನ ಆಧುನಿಕ ನಾರಿ ಎಲ್ಲಾ ಸಿದ್ದ ಸೂತ್ರಗಳನ್ನು ಮುರಿದು ಸಾಧನೆ ಮಾಡುತ್ತಿದ್ದಾಳೆ. ಮಹಿಳೆಗೆ ಉತ್ತೇಜನ ಮತ್ತು ಪ್ರೋತ್ಸಾಹ ಹಾಗೂ ಅವಕಾಶಗಳನ್ನು ನೀಡಬೇಕು ಎಂದು ಹೇಳಿದ್ರು.

ಬೆಂಗಳೂರು ಮಹಿಳಾ ಸಾಧಕಿಯರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್, ಶಾಸಕ ರಿಝ್ವಾನ್ ಆರ್ಶದ್, ಶಾಸಕಿ ಸೌಮ್ಯ ರೆಡ್ಡಿ, ಮಾಜಿ ಸಚಿವ ಸಂತೋಷ್ ಲಾಡ್, ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಮೊದಲಾದವರು ಭಾಗವಹಿಸಿದ್ದರು.

Tags: #Saaksha TVbangalorerashmi ravi kiran
ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram