ಬೆಂಗಳೂರು : ಫೇಸ್ ಬುಕ್ ಪೋಸ್ಟ್ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಆಗಮಿಸಿ ಅಖಂಡ ಶ್ರೀನಿವಾಸಮೂರ್ತಿ ದೂರು ನೀಡಿದ್ದಾರೆ.
ಮಂಗಳವಾರ ನಡೆದ ಗಲಭೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ, ಕಚೇರಿ, ಅಕ್ಕ ಪಕ್ಕದವರ ಆಸ್ತಿ-ಪಾಸ್ತಿ ಸಂಪೂರ್ಣವಾಗಿ ಧ್ವಂಸವಾಗಿತ್ತು. ಹೀಗಾಗಿ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಆರೋಪಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರು ಒತ್ತಾಯಿಸಿದ್ದಾರೆ.
ಕಿಡಿಗೇಡಿಗಳ ಕೃತ್ಯದಿಂದಾಗಿ ಶಾಸಕರ ಮನೆ ಹಾಗೂ ಕಚೇರಿಗೆ ಬೆಂಕಿ ಬಿದ್ದು ಸುಮಾರು 1.5 ಕೋಟಿ ಮೌಲ್ಯದ ಆಸ್ತಿ- ಪಾಸ್ತಿ ನಷ್ಟವಾಗಿದೆ. ಹೀಗಾಗಿ ತನ್ನ ಆಪ್ತರ ಜೊತೆ ಠಾಣೆಗೆ ತೆರಳಿ ಶಾಸಕರು ದೂರು ನೀಡಿದ್ದಾರೆ.