ಬೆಂಗಳೂರು ಯೂನಿವರ್ಸಿಟಿ ನಿವೃತ್ತ ಪ್ರೊಫೆಸರ್ ಆತ್ಮಹತ್ಯೆ
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್ ನೇಣಿಗೆ ಶರಣಾಗಿರುವ ಘಟನೆ ನಗರದ ಮೈಕೋ ಲೇಔಟ್ ನಲ್ಲಿ ನಡೆದಿದೆ.
ಅಶೋಕ್ ಕುಮಾರ್ ನೇಣಿಗೆ ಶರಣಾದ ರಿಟೈರ್ಡ್ ಪ್ರೊಫೆಸರ್ ಆಗಿದ್ದು, ಮೈಕೋ ಲೇಔಟ್ ನ ಕೆಎಎಸ್ ಕಾಲೋನಿಯಲ್ಲಿ ವಾಸವಾಗಿದ್ದ ಇವರು ಬೆಂಗಳೂರು ಯೂನಿವರ್ಸಿಟಿಯಲ್ಲಿ ಪ್ರೊಫೆಸರ್ ಆಗಿ ಕೆಲಸ ಮಾಡಿ ನಿವೃತ್ತಿಹೊಂದಿದ್ದರು.
ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಅಶೋಕ್, ರಾತ್ರಿ ಹನ್ನೆರಡು ಗಂಟೆವರೆಗೂ ಪತ್ನಿ ಜೊತೆಗೆ ಮಾತಾಡುತ್ತಿದ್ದರಂತೆ.
ಆದರೆ ಬೆಳಗ್ಗಿನ ಜಾವ 7 ಗಂಟೆ ಸುಮಾರಿಗೆ ರೂಮ್ ಬಾಗಿಲು ತೆರೆದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ.
ಬಾಲಕನ ಬಲಿ ಪಡೆದ ಗ್ರಾನೈಟ್ ಕ್ವಾರಿ: ಜಮೀನು ಮಾಲೀಕರ ವಿರುದ್ಧ ಕೇಸ್ ದಾಖಲು..!
ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಅಶೋಕ್. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ.
ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಸಂಜೆ ವೇಳೆ ಬೆಂಗಳೂರಿನಲ್ಲೇ ಅಂತ್ಯಕ್ರಿಯೆ ಮಾಡಲು ತೀರ್ಮಾನ ಮಾಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel